Advertisement
ಯಕ್ಷಗಾನ : ಮಾತು-ಮಸೆತ

ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

 

(ಬ್ರಹಸ್ಪತಿ ಪುತ್ರ ಕಚನು ಮೃತಸಂಜೀವಿನಿ ವಿದ್ಯೆಯನ್ನು ಕಲಿಯಲು ಶುಕ್ರಾಚಾರ್ಯರ ಆಶ್ರಮಕ್ಕೆ ಬರುತ್ತಾನೆ)

“ವತ್ಸಾ … ಕೆಲವೊಮ್ಮೆ ಈ ಪ್ರಪಂಚದಲ್ಲಿ ನಾವು ಎಣಿಸಿದಂತೆ ಅಲ್ಲ, ಎಣಿಸಿದ್ದಕ್ಕೆ ವಿಪರೀತವಾಗಿ ಕೆಲವು ಘಟನೆಗಳು ಒದಗುತ್ತವೆ. ಆಗ ಎಂತಹ ವಿದ್ವಾಂಸನಾದರೂ ಒಮ್ಮೆಗೆ ಆಶ್ಚರ್ಯಚಕಿತನಾಗುತ್ತಾನೆ. ಹೇಳಿ ಕೇಳಿ ವೃತ್ತಿಯಿಂದಲೂ, ಕ್ಷೇತ್ರ ವ್ಯತ್ಯಾಸದಿಂದಲೂ ನಿನ್ನ ತಂದೆಯಾದ ಬೃಹಸ್ಪತಿಗೂ, ನನಗೂ ಯಾವಾಗಲೂ ಸಂಘರ್ಷವೇ. ಆದರೆ ಒಂದು ಸಂತೋಷ. ನಮ್ಮೊಳಗೆ ಆಗುತ್ತಿರುವ ಸಂಘರ್ಷವು ಬೌದ್ಧಿಕವಾದುದು, ಭೌತಿಕವಾದುದಲ್ಲ. ಪ್ರಪಂಚದಲ್ಲಿ ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ ಪರಿಣಾಮವಾಗುತ್ತದೆ. ನೀನು ಬೃಹಸ್ಪತಿಯ ಮಗನಾದ್ದರಿಂದ ನನಗೆ ಅನ್ಯಥಾ ಭಾವನೆಯೇ ಇಲ್ಲ. ವೈಯಕ್ತಿಕವಾಗಿ ನಿನ್ನ ತಂದೆಗೂ ನನಗೂ ಏನೂ ರಾಗದ್ವೇಷಾದಿಗಳಿಲ್ಲ. ನಾವು ವಹಿಸಿಕೊಂಡಿರುವ ಪಕ್ಷ, ಆ ಪಕ್ಷದ ಉತ್ಕರ್ಷವನ್ನು ಬಯಸುವುದು ತಾತ್ವಿಕವಾಗಿ, ವೈಯಕ್ತಿಕವಾಗಿ ನೈತಿಕದ ಹೊಣೆ ಎಂಬುದರಲ್ಲಿ ಮಾತ್ರ. ಅವರಿದ್ದಲ್ಲಿ ನಾನಿಲ್ಲ, ನಾನಿದ್ದಲ್ಲಿ ಅವರಿಲ್ಲ. ಆದ ಕಾರಣ ಒಂದು ಮನೆಯ ಮಾಡಿನಡಿ ನಮಗೆ ಹೊಂದಾಣಿಕೆಯಿಲ್ಲ…

ನಿನ್ನ ಕೇಳಿಕೆಯಂತೂ ಸಾಧ್ಯವಿದ್ದ ಮಟ್ಟಿಗೆ ಯಾವ ವಿಘ್ನವಿಡ್ಡೂರಗಳಿದ್ದರೂ ಕಡೆಗಣಿಸಿ ನಾನು ಮಾಡಬೇಕಾದ, ಮಹಾಪ್ರಧಾನವಾದಂತಹ ಒಂದು ಕರ್ತವ್ಯವದು. ಪ್ರಾಣದಾನವು ದೊಡ್ಡ ದಾನ. ಹಾಗೆಯೇ ಅನ್ನದಾನ, ಔಷಧಿದಾನ. ನೀನು ಕೇಳುವಂತಹುದು ‘ವಿದ್ಯಾದಾನ.’ ವಿದ್ಯೆಯಿಂದ ಅಮೃತವನ್ನುಣಿಸುವುದು. ಮಿಕ್ಕದ್ದೆಲ್ಲ ಕ್ಷಣಿಕ. ಈ ದೇಹವಿದ್ದಷ್ಟು ಕಾಲ ಪ್ರಾಣದಾನ. ಹಸಿವೆ ಮುಗಿಯುವಲ್ಲಿಯ ತನಕ ಅನ್ನದಾನ. ರೋಗ ನಿವೃತ್ತಿಯಾಗುವಲ್ಲಿಯ ತನಕ ಔಷಧಿದಾನ. ಆದರೆ ಜೀವಾತ್ಮನಿಗೆ ಅಮೃತತ್ವ ಯೋಗವನ್ನು ಕರುಣಿಸುವುದು ಸತ್ಯವೂ, ಶಾಶ್ವತವೂ, ಸನಾತನವೂ ಆದ ‘ವಿದ್ಯೆ.’ ಆಚಾರ್ಯನೆಂದರೆ ಸಾಕ್ಷಾತ್ ಪರಬ್ರಹ್ಮ. ಅದು ಶ್ರುತಿವಾಕ್ಯ. ನೀನು ನನ್ನ ಶಿಷ್ಯ. ನನ್ನ ಗುರುತ್ವ ಅರ್ಥಪೂರ್ಣವಾಗಬೇಕು.”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

15 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago