Advertisement
ಯಕ್ಷಗಾನ : ಮಾತು-ಮಸೆತ

ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

 

(ಬ್ರಹಸ್ಪತಿ ಪುತ್ರ ಕಚನು ಮೃತಸಂಜೀವಿನಿ ವಿದ್ಯೆಯನ್ನು ಕಲಿಯಲು ಶುಕ್ರಾಚಾರ್ಯರ ಆಶ್ರಮಕ್ಕೆ ಬರುತ್ತಾನೆ)

“ವತ್ಸಾ … ಕೆಲವೊಮ್ಮೆ ಈ ಪ್ರಪಂಚದಲ್ಲಿ ನಾವು ಎಣಿಸಿದಂತೆ ಅಲ್ಲ, ಎಣಿಸಿದ್ದಕ್ಕೆ ವಿಪರೀತವಾಗಿ ಕೆಲವು ಘಟನೆಗಳು ಒದಗುತ್ತವೆ. ಆಗ ಎಂತಹ ವಿದ್ವಾಂಸನಾದರೂ ಒಮ್ಮೆಗೆ ಆಶ್ಚರ್ಯಚಕಿತನಾಗುತ್ತಾನೆ. ಹೇಳಿ ಕೇಳಿ ವೃತ್ತಿಯಿಂದಲೂ, ಕ್ಷೇತ್ರ ವ್ಯತ್ಯಾಸದಿಂದಲೂ ನಿನ್ನ ತಂದೆಯಾದ ಬೃಹಸ್ಪತಿಗೂ, ನನಗೂ ಯಾವಾಗಲೂ ಸಂಘರ್ಷವೇ. ಆದರೆ ಒಂದು ಸಂತೋಷ. ನಮ್ಮೊಳಗೆ ಆಗುತ್ತಿರುವ ಸಂಘರ್ಷವು ಬೌದ್ಧಿಕವಾದುದು, ಭೌತಿಕವಾದುದಲ್ಲ. ಪ್ರಪಂಚದಲ್ಲಿ ಬೌದ್ಧಿಕವಾದ ಸಂಘರ್ಷ ಎಷ್ಟು ಹೆಚ್ಚಾದರೂ ಮುಂದಿನ ಜನಾಂಗಕ್ಕೆ ಅದೊಂದು ಶುಭ ಪರಿಣಾಮವಾಗುತ್ತದೆ. ನೀನು ಬೃಹಸ್ಪತಿಯ ಮಗನಾದ್ದರಿಂದ ನನಗೆ ಅನ್ಯಥಾ ಭಾವನೆಯೇ ಇಲ್ಲ. ವೈಯಕ್ತಿಕವಾಗಿ ನಿನ್ನ ತಂದೆಗೂ ನನಗೂ ಏನೂ ರಾಗದ್ವೇಷಾದಿಗಳಿಲ್ಲ. ನಾವು ವಹಿಸಿಕೊಂಡಿರುವ ಪಕ್ಷ, ಆ ಪಕ್ಷದ ಉತ್ಕರ್ಷವನ್ನು ಬಯಸುವುದು ತಾತ್ವಿಕವಾಗಿ, ವೈಯಕ್ತಿಕವಾಗಿ ನೈತಿಕದ ಹೊಣೆ ಎಂಬುದರಲ್ಲಿ ಮಾತ್ರ. ಅವರಿದ್ದಲ್ಲಿ ನಾನಿಲ್ಲ, ನಾನಿದ್ದಲ್ಲಿ ಅವರಿಲ್ಲ. ಆದ ಕಾರಣ ಒಂದು ಮನೆಯ ಮಾಡಿನಡಿ ನಮಗೆ ಹೊಂದಾಣಿಕೆಯಿಲ್ಲ…

ನಿನ್ನ ಕೇಳಿಕೆಯಂತೂ ಸಾಧ್ಯವಿದ್ದ ಮಟ್ಟಿಗೆ ಯಾವ ವಿಘ್ನವಿಡ್ಡೂರಗಳಿದ್ದರೂ ಕಡೆಗಣಿಸಿ ನಾನು ಮಾಡಬೇಕಾದ, ಮಹಾಪ್ರಧಾನವಾದಂತಹ ಒಂದು ಕರ್ತವ್ಯವದು. ಪ್ರಾಣದಾನವು ದೊಡ್ಡ ದಾನ. ಹಾಗೆಯೇ ಅನ್ನದಾನ, ಔಷಧಿದಾನ. ನೀನು ಕೇಳುವಂತಹುದು ‘ವಿದ್ಯಾದಾನ.’ ವಿದ್ಯೆಯಿಂದ ಅಮೃತವನ್ನುಣಿಸುವುದು. ಮಿಕ್ಕದ್ದೆಲ್ಲ ಕ್ಷಣಿಕ. ಈ ದೇಹವಿದ್ದಷ್ಟು ಕಾಲ ಪ್ರಾಣದಾನ. ಹಸಿವೆ ಮುಗಿಯುವಲ್ಲಿಯ ತನಕ ಅನ್ನದಾನ. ರೋಗ ನಿವೃತ್ತಿಯಾಗುವಲ್ಲಿಯ ತನಕ ಔಷಧಿದಾನ. ಆದರೆ ಜೀವಾತ್ಮನಿಗೆ ಅಮೃತತ್ವ ಯೋಗವನ್ನು ಕರುಣಿಸುವುದು ಸತ್ಯವೂ, ಶಾಶ್ವತವೂ, ಸನಾತನವೂ ಆದ ‘ವಿದ್ಯೆ.’ ಆಚಾರ್ಯನೆಂದರೆ ಸಾಕ್ಷಾತ್ ಪರಬ್ರಹ್ಮ. ಅದು ಶ್ರುತಿವಾಕ್ಯ. ನೀನು ನನ್ನ ಶಿಷ್ಯ. ನನ್ನ ಗುರುತ್ವ ಅರ್ಥಪೂರ್ಣವಾಗಬೇಕು.”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

7 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

9 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

9 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

15 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

21 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago