ಸುಳ್ಯ: ವಾಸ್ತವ ವಾಗಿ ನಮಗೆ ಉಪಯೋಗ ಬರುವ ಸಂಗತಿಗಳನ್ನು ಕಲಿತುಕೊಂಡು ಪಠ್ಯದ ಜೊತೆ ಮುಂದೆ ಸಾಗಿದರೆ ಯಶಸ್ವಿ ವ್ಯಕ್ತಿಗಳಾಗುತ್ತೇವೆ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ವಾಣಿಜ್ಯ ಸಂಘ ದಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಬ್ಯಾಂಕು ವ್ಯವಹಾರಗಳ ಬಗೆಗಿನ ಅರ್ಧ ದಿನದ ಕಾರ್ಯಾಗಾರ ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು. ಬ್ಯಾಂಕು ವ್ಯವಹಾರ ನಡೆಸುವಲ್ಲಿ ಗ್ರಾಹಕರಾಗಿ ತಿಳಿದಿರಬೇಕಾದ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ತೊಡಗಿಸಿಕೊಳ್ಳುವಂತೆ ಕಾರ್ಯಾಗಾರವನ್ನು ನಡೆಸಲಾಗಿತ್ತು.
ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿ ಸಾವಿತ್ರಿ ಸ್ವಾಗತಿಸಿ ವಂದಿಸಿದರು. ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿಯಾರಾದ ಸಾವಿತ್ರಿ ಮತ್ತು ಹರ್ಷಿತಾ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…