Advertisement
ಸುದ್ದಿಗಳು

ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿ: ಸ್ವ-ಉದ್ಯೋಗದಿಂದ ಮಹಿಳಾ ಸಬಲೀಕರಣ

Share

ಧರ್ಮಸ್ಥಳ : ಉತ್ತಮ ಗುಣಮಟ್ಟದ ಶಿಕ್ಷಣ ನೌಕರಿ ಹಾಗೂ ಸ್ವ-ಉದ್ಯೋಗದೊಂದಿಗೆ ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ವಿಶೇಷವಾಗಿ ಸ್ವ-ಉದ್ಯೋಗ ತರಬೇತಿಯಿಂದಾಗಿ ಮಹಿಳಾ ಸಬಲೀಕರಣವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಉಜಿರೆಯಲ್ಲಿ ರುಡ್‍ಸೆಟ್ ಸಂಸ್ಥೆಯಲ್ಲಿ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಕೇಶ ವಿನ್ಯಾಸ ಹಾಗೂ ವಸ್ತ್ರ ವಿನ್ಯಾಸದ ಬಗ್ಗೆ ಇಂದು ಎಲ್ಲಾ ಕಡೆಗಳಿಂದಲೂ ಸಾಕಷ್ಟು ಉಪಯುಕ್ತ ಮಾಹಿತಿಗಳು ದೊರಕುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇಶ ವಿನ್ಯಾಸ ಹಾಗೂ ವಧುವಿನ ಅಲಂಕಾರದಲ್ಲಿ ಸೃಜನಾತ್ಮಕತೆ ಇರಬೇಕು. ಯುವತಿಯರನ್ನು ಸೆಕ್ಸಿಯಾಗಿ ಅಲಂಕರಿಸಬಾರದು, “ಲಕ್ಷ್ಮಿ”ಯಾಗಿ ಅಲಂಕರಿಸಬೇಕು ಎಂದು ಹೆಗ್ಗಡೆಯವರು ಕಿವಿಮಾತು ಹೇಳಿದರು. ಶ್ರದ್ಧೆಯಿಂದ, ಪ್ರಾಮಾಣಿಕವಾಗಿ, ವಿನೀತರಾಗಿ ಗ್ರಾಹಕರಿಗೆ ಉತ್ತಮ ಸೇವೆ ನೀಡಿ ಸರಳ ಜೀವನ ನಡೆಸಬೇಕುಎಂದುಅವರು ಸಲಹೆ ನೀಡಿದರು.

ಮೂಲತಃ ಕಾರ್ಕಳದ ನಿವಾಸಿಯಾಗಿದ್ದು ಪ್ರಸ್ತುತ ಮುಂಬಯಿನಲ್ಲಿ ಖ್ಯಾತ ಕೇಶ ವಿನ್ಯಾಸ ತಜ್ಞರಾದ ಶಿವರಾಂ ಕೆ.ಭಂಡಾರಿ ಮಾತನಾಡಿ ಹಸಿವಿನ ದಾಹವಿದ್ದಾಗ ಮಾತ್ರ ಜೀವನದಲ್ಲಿಉನ್ನತ ಸಾಧನೆ ಮಾಡಬಹುದು. ನಾವು ಯಾವುದೇ ಪ್ರತಿಪಲಾಪೇಕ್ಷೆಇಲ್ಲದೆ ಧನಾತ್ಮಕ ಚಿಂತನೆಯಿಂದ ನಮ್ಮ ಕರ್ತವ್ಯವನ್ನು ಮಾಡಿ ಇತರರ ಸೇವೆ ಮಾಡಬೇಕು ಎಂದು ಹೇಳಿದರು. ಶಿಬಿರಾರ್ಥಿಗಳ ಪರವಾಗಿ ಬೆಂಗಳೂರಿನ ಸುಷ್ಮಾ ಶಿವಕುಮಾರ್ ಮತ್ತುಅಮೀರ್‍ಜಾನ್‍ಎಂ.ಜೆ.ತಮ್ಮಅನುಭವವನ್ನು ವಿವರಿಸಿದರು. ಆರ್‍ಸೆಟಿಗಳ ರಾಷ್ಟ್ರೀಯ ನಿರ್ದೇಶಕ ಪಿ.ಸಂತೋಷ್ ಮತ್ತುಅಪರ್ಣಾ ಪಾಠಕ್ ಉಪಸ್ಥಿತರಿದ್ದರು.

ರುಡ್‍ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಎಮ್.ಜನಾರ್ದನ್ ಸ್ವಾಗತಿಸಿದರು. ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ಸಿ.ವಿನಯಕುಮಾರ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು. ನಾಲ್ಕು ದಿನ ನಡೆದ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ 29 ಮಂದಿ ಸೇರಿದಂತೆ ಒಟ್ಟು 54 ಮಂದಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

6 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago