ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಸಪರಿವಾರ ದೇವಸ್ಥಾನದಲ್ಲಿ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಲುವಾಗಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಲೇಶ್ವರ ದಾಮೋದರ ತಂತ್ರಿಗಳ ಭೇಟಿ ಮಾಡಿದರು.
ಸಮಿತಿ ವತಿಯಿಂದ ತಂತ್ರಿಗಳೊಂದಿಗೆ ಬ್ರಹ್ಮಕಲಶೋತ್ಸವದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ದೈವಜ್ಞರು ಸೂಚಿಸಿದಂತೆ ಹಾಗು ತಂತ್ರಿಗಳ ಮಾರ್ಗದರ್ಶನದಂತೆ ಜ.26ಕ್ಕೆ ತಂಟೆಪ್ಪಾಡಿಯ ಶಿರಾಡಿ ದೈವಸ್ಥಾನ, ನಾಗನಕಟ್ಟೆ, ಬಾಳಿಲ ಬಳಿಯ ನೆಟ್ಟಾರಿನ ನಾಗನಕಟ್ಟೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಜ.27ರಂದು ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಕಲ್ಲಮಾಡದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಜ.28ರಿಂದ ಜ.30ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.
ದೇವಳದ ಮೊಕ್ತೇಸರ ಬಾಳಿಲ ರಾಮಚಂದ್ರ ರಾವ್, ಸುಬ್ರಹ್ಮಣ್ಯ ಮುಂಡುಗಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿಜಿಎಸ್ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಪ್ರೀತೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…