ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಸಪರಿವಾರ ದೇವಸ್ಥಾನದಲ್ಲಿ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಲುವಾಗಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಲೇಶ್ವರ ದಾಮೋದರ ತಂತ್ರಿಗಳ ಭೇಟಿ ಮಾಡಿದರು.
ಸಮಿತಿ ವತಿಯಿಂದ ತಂತ್ರಿಗಳೊಂದಿಗೆ ಬ್ರಹ್ಮಕಲಶೋತ್ಸವದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ದೈವಜ್ಞರು ಸೂಚಿಸಿದಂತೆ ಹಾಗು ತಂತ್ರಿಗಳ ಮಾರ್ಗದರ್ಶನದಂತೆ ಜ.26ಕ್ಕೆ ತಂಟೆಪ್ಪಾಡಿಯ ಶಿರಾಡಿ ದೈವಸ್ಥಾನ, ನಾಗನಕಟ್ಟೆ, ಬಾಳಿಲ ಬಳಿಯ ನೆಟ್ಟಾರಿನ ನಾಗನಕಟ್ಟೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಜ.27ರಂದು ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಕಲ್ಲಮಾಡದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಜ.28ರಿಂದ ಜ.30ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.
ದೇವಳದ ಮೊಕ್ತೇಸರ ಬಾಳಿಲ ರಾಮಚಂದ್ರ ರಾವ್, ಸುಬ್ರಹ್ಮಣ್ಯ ಮುಂಡುಗಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿಜಿಎಸ್ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಪ್ರೀತೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?