ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಸಪರಿವಾರ ದೇವಸ್ಥಾನದಲ್ಲಿ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಲುವಾಗಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಲೇಶ್ವರ ದಾಮೋದರ ತಂತ್ರಿಗಳ ಭೇಟಿ ಮಾಡಿದರು.
ಸಮಿತಿ ವತಿಯಿಂದ ತಂತ್ರಿಗಳೊಂದಿಗೆ ಬ್ರಹ್ಮಕಲಶೋತ್ಸವದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ದೈವಜ್ಞರು ಸೂಚಿಸಿದಂತೆ ಹಾಗು ತಂತ್ರಿಗಳ ಮಾರ್ಗದರ್ಶನದಂತೆ ಜ.26ಕ್ಕೆ ತಂಟೆಪ್ಪಾಡಿಯ ಶಿರಾಡಿ ದೈವಸ್ಥಾನ, ನಾಗನಕಟ್ಟೆ, ಬಾಳಿಲ ಬಳಿಯ ನೆಟ್ಟಾರಿನ ನಾಗನಕಟ್ಟೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಜ.27ರಂದು ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಕಲ್ಲಮಾಡದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಜ.28ರಿಂದ ಜ.30ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.
ದೇವಳದ ಮೊಕ್ತೇಸರ ಬಾಳಿಲ ರಾಮಚಂದ್ರ ರಾವ್, ಸುಬ್ರಹ್ಮಣ್ಯ ಮುಂಡುಗಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿಜಿಎಸ್ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಪ್ರೀತೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…