ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಸಪರಿವಾರ ದೇವಸ್ಥಾನದಲ್ಲಿ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಲುವಾಗಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಲೇಶ್ವರ ದಾಮೋದರ ತಂತ್ರಿಗಳ ಭೇಟಿ ಮಾಡಿದರು.
ಸಮಿತಿ ವತಿಯಿಂದ ತಂತ್ರಿಗಳೊಂದಿಗೆ ಬ್ರಹ್ಮಕಲಶೋತ್ಸವದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ದೈವಜ್ಞರು ಸೂಚಿಸಿದಂತೆ ಹಾಗು ತಂತ್ರಿಗಳ ಮಾರ್ಗದರ್ಶನದಂತೆ ಜ.26ಕ್ಕೆ ತಂಟೆಪ್ಪಾಡಿಯ ಶಿರಾಡಿ ದೈವಸ್ಥಾನ, ನಾಗನಕಟ್ಟೆ, ಬಾಳಿಲ ಬಳಿಯ ನೆಟ್ಟಾರಿನ ನಾಗನಕಟ್ಟೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಜ.27ರಂದು ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಕಲ್ಲಮಾಡದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಜ.28ರಿಂದ ಜ.30ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.
ದೇವಳದ ಮೊಕ್ತೇಸರ ಬಾಳಿಲ ರಾಮಚಂದ್ರ ರಾವ್, ಸುಬ್ರಹ್ಮಣ್ಯ ಮುಂಡುಗಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿಜಿಎಸ್ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಪ್ರೀತೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು.
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…
ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…
ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli) ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು…
ಬಿಸಿಲಿನ ಪರಿಣಾಮ ತರಕಾರಿ ಧಾರಣೆ ಏರಿಕೆಯ ಹಾದಿಯಲ್ಲಿದೆ.