ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಸಪರಿವಾರ ದೇವಸ್ಥಾನದಲ್ಲಿ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಲುವಾಗಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಲೇಶ್ವರ ದಾಮೋದರ ತಂತ್ರಿಗಳ ಭೇಟಿ ಮಾಡಿದರು.
ಸಮಿತಿ ವತಿಯಿಂದ ತಂತ್ರಿಗಳೊಂದಿಗೆ ಬ್ರಹ್ಮಕಲಶೋತ್ಸವದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ದೈವಜ್ಞರು ಸೂಚಿಸಿದಂತೆ ಹಾಗು ತಂತ್ರಿಗಳ ಮಾರ್ಗದರ್ಶನದಂತೆ ಜ.26ಕ್ಕೆ ತಂಟೆಪ್ಪಾಡಿಯ ಶಿರಾಡಿ ದೈವಸ್ಥಾನ, ನಾಗನಕಟ್ಟೆ, ಬಾಳಿಲ ಬಳಿಯ ನೆಟ್ಟಾರಿನ ನಾಗನಕಟ್ಟೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಜ.27ರಂದು ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಕಲ್ಲಮಾಡದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಜ.28ರಿಂದ ಜ.30ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.
ದೇವಳದ ಮೊಕ್ತೇಸರ ಬಾಳಿಲ ರಾಮಚಂದ್ರ ರಾವ್, ಸುಬ್ರಹ್ಮಣ್ಯ ಮುಂಡುಗಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿಜಿಎಸ್ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಪ್ರೀತೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…