ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ.
ಈ ಬಗ್ಗೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿ, ತಹಶೀಲ್ದಾರ್, ಮಡಿಕೇರಿ ತಾಲ್ಲೂಕು ಇವರು ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಸ್ತೆಯಿಂದ 200 ಮೀಟರ್ ಎತ್ತರದಲ್ಲಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಳಭಾಗದಲ್ಲಿರುವ ಅಂಗಡಿಗಳ ಮಾಲೀಕರಿಗೆ ತಾತ್ಕಾಲಿಕವಾಗಿ ಅಂಗಡಿ ಖಾಲಿಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಳಭಾಗದಲ್ಲಿರುವ ಮನೆಗಳ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳನ್ನು ಖಾಲಿ ಮಾಡಲು ಗ್ರಾಮ ಪಂಚಾಯತ್ ವತಿಯಿಂದ ನೋಟೀಸು ನೀಡಲಾಗಿದೆ. ಸದರಿ ಪ್ರದೇಶದ ಇನ್ನೊಂದು ಭಾಗದಲ್ಲಿ ಜಾರಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಭೂ ಸರ್ವೇಕ್ಷಣಾ ಇಲಾಖೆಯ ಸಲಹೆಯಂತೆ ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹೊದಿಸಿ ಮಣ್ಣು ಮುಚ್ಚಲು ಕ್ರಮ ವಹಿಸಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…