ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ.
ಈ ಬಗ್ಗೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿ, ತಹಶೀಲ್ದಾರ್, ಮಡಿಕೇರಿ ತಾಲ್ಲೂಕು ಇವರು ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಸ್ತೆಯಿಂದ 200 ಮೀಟರ್ ಎತ್ತರದಲ್ಲಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಳಭಾಗದಲ್ಲಿರುವ ಅಂಗಡಿಗಳ ಮಾಲೀಕರಿಗೆ ತಾತ್ಕಾಲಿಕವಾಗಿ ಅಂಗಡಿ ಖಾಲಿಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಳಭಾಗದಲ್ಲಿರುವ ಮನೆಗಳ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳನ್ನು ಖಾಲಿ ಮಾಡಲು ಗ್ರಾಮ ಪಂಚಾಯತ್ ವತಿಯಿಂದ ನೋಟೀಸು ನೀಡಲಾಗಿದೆ. ಸದರಿ ಪ್ರದೇಶದ ಇನ್ನೊಂದು ಭಾಗದಲ್ಲಿ ಜಾರಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಭೂ ಸರ್ವೇಕ್ಷಣಾ ಇಲಾಖೆಯ ಸಲಹೆಯಂತೆ ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹೊದಿಸಿ ಮಣ್ಣು ಮುಚ್ಚಲು ಕ್ರಮ ವಹಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…