ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ.
ಈ ಬಗ್ಗೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿ, ತಹಶೀಲ್ದಾರ್, ಮಡಿಕೇರಿ ತಾಲ್ಲೂಕು ಇವರು ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಸ್ತೆಯಿಂದ 200 ಮೀಟರ್ ಎತ್ತರದಲ್ಲಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಳಭಾಗದಲ್ಲಿರುವ ಅಂಗಡಿಗಳ ಮಾಲೀಕರಿಗೆ ತಾತ್ಕಾಲಿಕವಾಗಿ ಅಂಗಡಿ ಖಾಲಿಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಳಭಾಗದಲ್ಲಿರುವ ಮನೆಗಳ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳನ್ನು ಖಾಲಿ ಮಾಡಲು ಗ್ರಾಮ ಪಂಚಾಯತ್ ವತಿಯಿಂದ ನೋಟೀಸು ನೀಡಲಾಗಿದೆ. ಸದರಿ ಪ್ರದೇಶದ ಇನ್ನೊಂದು ಭಾಗದಲ್ಲಿ ಜಾರಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಭೂ ಸರ್ವೇಕ್ಷಣಾ ಇಲಾಖೆಯ ಸಲಹೆಯಂತೆ ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹೊದಿಸಿ ಮಣ್ಣು ಮುಚ್ಚಲು ಕ್ರಮ ವಹಿಸಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…