ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ.
ಈ ಬಗ್ಗೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿ, ತಹಶೀಲ್ದಾರ್, ಮಡಿಕೇರಿ ತಾಲ್ಲೂಕು ಇವರು ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಸ್ತೆಯಿಂದ 200 ಮೀಟರ್ ಎತ್ತರದಲ್ಲಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಳಭಾಗದಲ್ಲಿರುವ ಅಂಗಡಿಗಳ ಮಾಲೀಕರಿಗೆ ತಾತ್ಕಾಲಿಕವಾಗಿ ಅಂಗಡಿ ಖಾಲಿಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಳಭಾಗದಲ್ಲಿರುವ ಮನೆಗಳ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳನ್ನು ಖಾಲಿ ಮಾಡಲು ಗ್ರಾಮ ಪಂಚಾಯತ್ ವತಿಯಿಂದ ನೋಟೀಸು ನೀಡಲಾಗಿದೆ. ಸದರಿ ಪ್ರದೇಶದ ಇನ್ನೊಂದು ಭಾಗದಲ್ಲಿ ಜಾರಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಭೂ ಸರ್ವೇಕ್ಷಣಾ ಇಲಾಖೆಯ ಸಲಹೆಯಂತೆ ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹೊದಿಸಿ ಮಣ್ಣು ಮುಚ್ಚಲು ಕ್ರಮ ವಹಿಸಲಾಗಿದೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…