ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ.
ಈ ಬಗ್ಗೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿ, ತಹಶೀಲ್ದಾರ್, ಮಡಿಕೇರಿ ತಾಲ್ಲೂಕು ಇವರು ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಸ್ತೆಯಿಂದ 200 ಮೀಟರ್ ಎತ್ತರದಲ್ಲಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಳಭಾಗದಲ್ಲಿರುವ ಅಂಗಡಿಗಳ ಮಾಲೀಕರಿಗೆ ತಾತ್ಕಾಲಿಕವಾಗಿ ಅಂಗಡಿ ಖಾಲಿಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಳಭಾಗದಲ್ಲಿರುವ ಮನೆಗಳ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳನ್ನು ಖಾಲಿ ಮಾಡಲು ಗ್ರಾಮ ಪಂಚಾಯತ್ ವತಿಯಿಂದ ನೋಟೀಸು ನೀಡಲಾಗಿದೆ. ಸದರಿ ಪ್ರದೇಶದ ಇನ್ನೊಂದು ಭಾಗದಲ್ಲಿ ಜಾರಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಭೂ ಸರ್ವೇಕ್ಷಣಾ ಇಲಾಖೆಯ ಸಲಹೆಯಂತೆ ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹೊದಿಸಿ ಮಣ್ಣು ಮುಚ್ಚಲು ಕ್ರಮ ವಹಿಸಲಾಗಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…