ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ.
ಈ ಬಗ್ಗೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿ, ತಹಶೀಲ್ದಾರ್, ಮಡಿಕೇರಿ ತಾಲ್ಲೂಕು ಇವರು ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಸ್ತೆಯಿಂದ 200 ಮೀಟರ್ ಎತ್ತರದಲ್ಲಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಳಭಾಗದಲ್ಲಿರುವ ಅಂಗಡಿಗಳ ಮಾಲೀಕರಿಗೆ ತಾತ್ಕಾಲಿಕವಾಗಿ ಅಂಗಡಿ ಖಾಲಿಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಳಭಾಗದಲ್ಲಿರುವ ಮನೆಗಳ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳನ್ನು ಖಾಲಿ ಮಾಡಲು ಗ್ರಾಮ ಪಂಚಾಯತ್ ವತಿಯಿಂದ ನೋಟೀಸು ನೀಡಲಾಗಿದೆ. ಸದರಿ ಪ್ರದೇಶದ ಇನ್ನೊಂದು ಭಾಗದಲ್ಲಿ ಜಾರಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಭೂ ಸರ್ವೇಕ್ಷಣಾ ಇಲಾಖೆಯ ಸಲಹೆಯಂತೆ ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹೊದಿಸಿ ಮಣ್ಣು ಮುಚ್ಚಲು ಕ್ರಮ ವಹಿಸಲಾಗಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…