Advertisement
ಸುದ್ದಿಗಳು

ಬ್ರಹ್ಮಗಿರಿ ಬೆಟ್ಟ ಜಾರದಂತೆ ಗಿಡ ನೆಡುವ ಕಾರ್ಯಕ್ರಮ

Share
ಮಡಿಕೇರಿ:  ತಲಕಾವೇರಿಯ ಬ್ರಹ್ಮಗಿರಿ ಬೆಟ್ಟವು ಜಾರದಂತೆ ವೆಟ್ಟಿವೆರ್ ಹುಲ್ಲು ಗಿಡವನ್ನು ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಹಿರಿಯರಾದ ನೆಲ್ಲಮಕ್ಕಾದ ಶಂಭೋ ಮತ್ತು ಕ್ಷೇತ್ರ ಅರ್ಚಕರಾದ ನಾರಾಯಣ ಆಚಾರ್ ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹುಲ್ಲು ಬೆಳೆಗಾರರಾದ ತೇಲಪಂಡ ಪ್ರಮೋದ್ ಅವರು ಮಾತನಾಡುತ್ತಾ ವೆಟ್ಟಿವೆರ್ ಎನ್ನುವ ಹುಲ್ಲಿನ ಬೇರು ಸುಮಾರು 18 ಅಡಿ ಭೂಮಿಯ ಕೆಳಗೆ ಹರಡಿವುದರಿಂದ ಮಳೇ ಜಾಸ್ತಿಯಾಗಿ ಬರೆಯ ಮಣ್ಣು ಹದಗೊಳ್ಳುವುದನ್ನು ತಡೆಯಬಹುದೆಂದರು. ಈ ಹುಲ್ಲನ್ನು ಕಳೆದ ವರ್ಷದ ಪ್ರಕೃತಿ ವಿಕೋಪ ನಡೆದ ಸ್ಥಳಗಳಿಗೆ ಕುಪ್ಪಂಡ ಪ್ರೇಮ್ನಾಥ್ ಅವರ ಕುನ್ನೂರುನಿಂದ ತಂದು ತಮ್ಮ ಹಾಕತ್ತೂರಿನ ಗದ್ದೆಯಲ್ಲಿ ಬೆಳಸಲಾಗಿದೆಯೆಂದರು .ಕೊಡಗಿನ ಜನತೆಗೆ ಏನಾದರು ಇದರ ಸಸಿ ಮಡಿ ಬೇಕೆಂದರೆ ಕೇವಲ ಒಂದು ರೂಪಾಯಿ ಪಾವತಿಸಿ ಪಡೆಯಬಹುದೆಂದರು .ತೀರಾ ಬಡವರಾದರೆ ಹಾಗೆಯೆ ನೀಡಲಾಗುವುದೆಂದರು.
ನಂತರ ಅಲ್ಲಿ ನೆರೆದಿದ್ದ ಅರಣ್ಯ ಇಲಾಖೆ ಮತ್ತು ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಗೆ ಅದರ ಉಪಯೋಗ ಮತ್ತು ಮಹತ್ವ ಅನ್ನು ತಿಳಿಸಿಕೊಟ್ಟರು ಮತ್ತು ಅದನ್ನು ನಾಟಿ ಮಾಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ ಉದ್ಘಾಟಿಸಿ ಮಾತನಾಡಿದರು .ವ್ಯವಸ್ಥಾಪನ ಸಮಿತಿಯ ಅಮ್ಮತಿ ಕೊಡವಸಮಾಜದ ನಿರ್ದೇಶಕರಾದ ಮುಕ್ಕಾಟಿರ ಸುರೇಶ್ , ಸೇವಾ ಕೇಂದ್ರದ ತಮ್ಮ ಪೂವಯ್ಯ, ಮಂಧಪಂಡ ಸತೀಶ್ ಮುಂತಾದವರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಮಾನವಟ್ಟಿರ ದೊರೆ ಮತ್ತು ಸಂಗಡಿಗರು ,ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ,ಅರಣ್ಯ ಇಲಾಖೆ ,ಮತ್ತು ಅರ್ಚಕರ ವೃಂದ ಒಡಗೂಡಿ ಆಯೋಜಿಸಿದ್ದರು .
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

13 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

13 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago