Advertisement
ಸುದ್ದಿಗಳು

ಬ್ರಹ್ಮಗಿರಿ ಬೆಟ್ಟ ಜಾರದಂತೆ ಗಿಡ ನೆಡುವ ಕಾರ್ಯಕ್ರಮ

Share
ಮಡಿಕೇರಿ:  ತಲಕಾವೇರಿಯ ಬ್ರಹ್ಮಗಿರಿ ಬೆಟ್ಟವು ಜಾರದಂತೆ ವೆಟ್ಟಿವೆರ್ ಹುಲ್ಲು ಗಿಡವನ್ನು ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಹಿರಿಯರಾದ ನೆಲ್ಲಮಕ್ಕಾದ ಶಂಭೋ ಮತ್ತು ಕ್ಷೇತ್ರ ಅರ್ಚಕರಾದ ನಾರಾಯಣ ಆಚಾರ್ ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹುಲ್ಲು ಬೆಳೆಗಾರರಾದ ತೇಲಪಂಡ ಪ್ರಮೋದ್ ಅವರು ಮಾತನಾಡುತ್ತಾ ವೆಟ್ಟಿವೆರ್ ಎನ್ನುವ ಹುಲ್ಲಿನ ಬೇರು ಸುಮಾರು 18 ಅಡಿ ಭೂಮಿಯ ಕೆಳಗೆ ಹರಡಿವುದರಿಂದ ಮಳೇ ಜಾಸ್ತಿಯಾಗಿ ಬರೆಯ ಮಣ್ಣು ಹದಗೊಳ್ಳುವುದನ್ನು ತಡೆಯಬಹುದೆಂದರು. ಈ ಹುಲ್ಲನ್ನು ಕಳೆದ ವರ್ಷದ ಪ್ರಕೃತಿ ವಿಕೋಪ ನಡೆದ ಸ್ಥಳಗಳಿಗೆ ಕುಪ್ಪಂಡ ಪ್ರೇಮ್ನಾಥ್ ಅವರ ಕುನ್ನೂರುನಿಂದ ತಂದು ತಮ್ಮ ಹಾಕತ್ತೂರಿನ ಗದ್ದೆಯಲ್ಲಿ ಬೆಳಸಲಾಗಿದೆಯೆಂದರು .ಕೊಡಗಿನ ಜನತೆಗೆ ಏನಾದರು ಇದರ ಸಸಿ ಮಡಿ ಬೇಕೆಂದರೆ ಕೇವಲ ಒಂದು ರೂಪಾಯಿ ಪಾವತಿಸಿ ಪಡೆಯಬಹುದೆಂದರು .ತೀರಾ ಬಡವರಾದರೆ ಹಾಗೆಯೆ ನೀಡಲಾಗುವುದೆಂದರು.
ನಂತರ ಅಲ್ಲಿ ನೆರೆದಿದ್ದ ಅರಣ್ಯ ಇಲಾಖೆ ಮತ್ತು ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಗೆ ಅದರ ಉಪಯೋಗ ಮತ್ತು ಮಹತ್ವ ಅನ್ನು ತಿಳಿಸಿಕೊಟ್ಟರು ಮತ್ತು ಅದನ್ನು ನಾಟಿ ಮಾಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ ಉದ್ಘಾಟಿಸಿ ಮಾತನಾಡಿದರು .ವ್ಯವಸ್ಥಾಪನ ಸಮಿತಿಯ ಅಮ್ಮತಿ ಕೊಡವಸಮಾಜದ ನಿರ್ದೇಶಕರಾದ ಮುಕ್ಕಾಟಿರ ಸುರೇಶ್ , ಸೇವಾ ಕೇಂದ್ರದ ತಮ್ಮ ಪೂವಯ್ಯ, ಮಂಧಪಂಡ ಸತೀಶ್ ಮುಂತಾದವರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಮಾನವಟ್ಟಿರ ದೊರೆ ಮತ್ತು ಸಂಗಡಿಗರು ,ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ,ಅರಣ್ಯ ಇಲಾಖೆ ,ಮತ್ತು ಅರ್ಚಕರ ವೃಂದ ಒಡಗೂಡಿ ಆಯೋಜಿಸಿದ್ದರು .
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

8 minutes ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

8 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

8 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

8 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

8 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

18 hours ago