ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚು ಮೂಲಸೌಲಭ್ಯ, ಶುಚಿತ್ವ ಮತ್ತು ನೈರ್ಮಲ್ಯ ಹೊಂದಿದೆ. ಸಾಮರಸ್ಯದ ಇತಿಹಾಸವೂ ಇದೆ. ಇಲ್ಲಿಯ ಬ್ರ್ಯಾಂಡ್ ಹೆಸರು ಉಳಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂಬ ಅಭಿಪ್ರಾಯವು ಜಿಲ್ಲಾ ಪತ್ರಕರ್ತರ ಸಮ್ಮಳನದಲ್ಲಿ ಕೇಳಿಬಂತು.
ಬ್ರ್ಯಾಂಡ್ ಮಂಗಳೂರು ಎಂಬ ವಿವಿಧ ಪತ್ರಿಕೆಗಳ ಮುಖ್ಯಸ್ಥರ ಗೋಷ್ಠಿಯಲ್ಲಿ, ಕಳೆದ ಮೂರು ದಶಕಗಳಲ್ಲಿ ಮಂಗಳೂರು ಸಾಕಷ್ಟು ಬದಲಾವಣೆ ಕಂಡಿದೆ. ಹೊಸ ಸೌಲಭ್ಯಗಳು ಬಂದಿದೆ. ಆದರೆ, ಕೆಲವು ಘಟನೆಗಳು ಮತ್ತು ಅದರ ವೈಭವೀಕರಣದಿಂದ ಹೊರ ಜಗತ್ತಿನಲ್ಲಿ ಮಂಗಳೂರಿನ ಹೆಸರು ಹಾಳಾಗುತ್ತಿದೆ. ಬ್ರ್ಯಾಂಡ್ ಮಂಗಳೂರು ಉಳಿಸಲು ಮಾಧ್ಯಮಗಳ ಮುಖ್ಯಸ್ಥರು ಪ್ರಮುಖ ಪಾತ್ರ ವಹಿಸಬೇಕು ಎಂಬ ಅಭಿಪ್ರಾಯ ಕೇಳಿಬಂತು.
ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಪತ್ರಿಕೆಗಳ ಮುಖ್ಯಸ್ಥರಾದ ಯು.ಕೆ.ಕುಮಾರ್ನಾಥ್, ಸುರೇಶ್ ಪುದುವೆಟ್ಟು, ಅಬ್ದುಸ್ಸಲಾಂ ಪುತ್ತಿಗೆ, ಡಾ.ಯು.ಪಿ. ಶಿವಾನಂದ ವಿಚಾರ ಮಂಡಿಸಿದರು.
ರಾಮಕೃಷ್ಣ ಆರ್., ಹರ್ಷ, ಜಿತೇಂದ್ರ ಕುಂದೇಶ್ವರ, , ಕೆ.ಯು.ಜಾರ್ಜ್, ಲೀಲಾಕ್ಷ ಕರ್ಕೇರ, ಲಕ್ಷ್ಮಣ್ ಕುಂದರ್ ಉಪಸ್ಥಿತರಿದ್ದರು. ಗೋಷ್ಠಿ ಬಳಿಕ ಪ್ರಶ್ನೋತ್ತರ ನಡೆಯಿತು.
ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ವಿಜಯ್ ಕೋಟ್ಯಾನ್ ಸ್ವಾಗತಿಸಿ ಪುಷ್ಪರಾಜ್ ವಿಚಾರ ಮಂಡಿಸಿದರು, ಹಿಲರಿ ಕ್ರಾಸ್ತ ವಂದಿಸಿದರು. ಮಾಜಿ ಅಧ್ಯಕ್ಷ ಬಿ.ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…