ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚು ಮೂಲಸೌಲಭ್ಯ, ಶುಚಿತ್ವ ಮತ್ತು ನೈರ್ಮಲ್ಯ ಹೊಂದಿದೆ. ಸಾಮರಸ್ಯದ ಇತಿಹಾಸವೂ ಇದೆ. ಇಲ್ಲಿಯ ಬ್ರ್ಯಾಂಡ್ ಹೆಸರು ಉಳಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂಬ ಅಭಿಪ್ರಾಯವು ಜಿಲ್ಲಾ ಪತ್ರಕರ್ತರ ಸಮ್ಮಳನದಲ್ಲಿ ಕೇಳಿಬಂತು.
ಬ್ರ್ಯಾಂಡ್ ಮಂಗಳೂರು ಎಂಬ ವಿವಿಧ ಪತ್ರಿಕೆಗಳ ಮುಖ್ಯಸ್ಥರ ಗೋಷ್ಠಿಯಲ್ಲಿ, ಕಳೆದ ಮೂರು ದಶಕಗಳಲ್ಲಿ ಮಂಗಳೂರು ಸಾಕಷ್ಟು ಬದಲಾವಣೆ ಕಂಡಿದೆ. ಹೊಸ ಸೌಲಭ್ಯಗಳು ಬಂದಿದೆ. ಆದರೆ, ಕೆಲವು ಘಟನೆಗಳು ಮತ್ತು ಅದರ ವೈಭವೀಕರಣದಿಂದ ಹೊರ ಜಗತ್ತಿನಲ್ಲಿ ಮಂಗಳೂರಿನ ಹೆಸರು ಹಾಳಾಗುತ್ತಿದೆ. ಬ್ರ್ಯಾಂಡ್ ಮಂಗಳೂರು ಉಳಿಸಲು ಮಾಧ್ಯಮಗಳ ಮುಖ್ಯಸ್ಥರು ಪ್ರಮುಖ ಪಾತ್ರ ವಹಿಸಬೇಕು ಎಂಬ ಅಭಿಪ್ರಾಯ ಕೇಳಿಬಂತು.
ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಪತ್ರಿಕೆಗಳ ಮುಖ್ಯಸ್ಥರಾದ ಯು.ಕೆ.ಕುಮಾರ್ನಾಥ್, ಸುರೇಶ್ ಪುದುವೆಟ್ಟು, ಅಬ್ದುಸ್ಸಲಾಂ ಪುತ್ತಿಗೆ, ಡಾ.ಯು.ಪಿ. ಶಿವಾನಂದ ವಿಚಾರ ಮಂಡಿಸಿದರು.
ರಾಮಕೃಷ್ಣ ಆರ್., ಹರ್ಷ, ಜಿತೇಂದ್ರ ಕುಂದೇಶ್ವರ, , ಕೆ.ಯು.ಜಾರ್ಜ್, ಲೀಲಾಕ್ಷ ಕರ್ಕೇರ, ಲಕ್ಷ್ಮಣ್ ಕುಂದರ್ ಉಪಸ್ಥಿತರಿದ್ದರು. ಗೋಷ್ಠಿ ಬಳಿಕ ಪ್ರಶ್ನೋತ್ತರ ನಡೆಯಿತು.
ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ವಿಜಯ್ ಕೋಟ್ಯಾನ್ ಸ್ವಾಗತಿಸಿ ಪುಷ್ಪರಾಜ್ ವಿಚಾರ ಮಂಡಿಸಿದರು, ಹಿಲರಿ ಕ್ರಾಸ್ತ ವಂದಿಸಿದರು. ಮಾಜಿ ಅಧ್ಯಕ್ಷ ಬಿ.ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…