ಸುಳ್ಯ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.
ಕೆಪಿಸಿಸಿ ಕಾರ್ಯದರ್ಶಿ ಯಾಗಿ ಕರ್ತವ್ಯ ನಿರ್ವಹಿಸಿದಾಗ ಆರು ಬ್ಲಾಕ್ ಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದೆ. ಕೆಪಿಸಿಸಿ ಕಾರ್ಯದರ್ಶಿಯಂತಹಾ ಹುದ್ದೆಯನ್ನು ನಿರ್ವಹಿಸಿ ಮತ್ತೆ ಬ್ಲಾಕ್ ಕಾಂಗ್ರೆಸ್ ಹುದ್ದೆಯನ್ನು ವಹಿಸಿಕೊಳ್ಳುವುದಿಲ್ಲ. ಈಗಿನ ಅಧ್ಯಕ್ಷರು ನೀಡಿದ ರಾಜಿನಾಮೆ ಅಂಗೀಕಾರ ಆದರೆ ಹೈಕಮಾಂಡ್ ಸೂಕ್ತ ಅಭ್ಯರ್ಥಿಯನ್ನು ಅಧ್ಯಕ್ಷಾರನ್ನಾಗಿ ನೇಮಕ ಮಾಡಬಹುದು. ನಮ್ಮಲ್ಲಿ ಸಾಕಷ್ಟು ಮಂದಿ ಅರ್ಹರು ಇದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ರಾಜಿನಾಮೆ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಕಾಂಗ್ರೆಸ್ ನ ಸಭೆಯಲ್ಲಿ ಉಂಟಾದ ಭಿನ್ನಮತದ ಬಗ್ಗೆ ಹೊರಗೆ ಮಾತನಾಡುವುದಿಲ್ಲ. ಅಂತಹಾ ವಿಷಯಗಳನ್ನು ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚೆ ಮಾಡುತ್ತೇವೆ. ಸಾಂದರ್ಭಿಕ ಕಾರಣಗಳಿಂದ ಸಭೆಯಲ್ಲಿ ಚರ್ಚೆ ನಡೆದಿದೆಯೇ ಹೊರತು ಭಿನ್ನಮತ ಕಾರಣ ಅಲ್ಲ ಎಂದು ಅವರು ಹೇಳಿದರು. ಕೆಪಿಸಿಸಿ ಪುನಾರಚನೆ ಸಂದರ್ಭ ಸುಳ್ಯದ ನಾಯಕರಿಗೆ ಸೂಕ್ತ ಸ್ಥಾನ ಮತ್ತೆ ದೊರಕುವ ವಿಶ್ವಾಸ ಇದೆ ಎಂದರು.
ಕೆಲಸ ಕಾಂಗ್ರೇಸ್ ನವರದ್ದು ಮತ ಬಿಜೆಪಿಗೆ:
ಅಂಗಡಿಮಜಲು ಸೇತುವೆ, ಅರಂಬೂರು ಸೇತುವೆ, ಬೆಂಡೋಡಿ ಸೇತುವೆ ಹೀಗೆ ಎಲ್ಲಾ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ತರುವುದು ಕಾಂಗ್ರೆಸ್. ಆದರೆ ಇಲ್ಲೆಲ್ಲಾ ಜನ ಮತ ಹಾಕುವುದು ಮಾತ್ರ ಬಿಜೆಪಿಗೆ. ಕೆಲಸ ಮಾಡುವವರಿಗೆ ಜನ ಮತ ನೀಡುತ್ತಿಲ್ಲ ಎಂಬ ನೋವು ಇದೆ ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಲೋಕಸಭಾ ಚುನಾವಣೆಯ ಫಲಿತಾಂಶವು ನಗರ ಪಂಚಾಯತ್ ಚುನಾವಣೆ ಮೇಲೂ ಪರಿಣಾಮ ಬೀರಿ ಕಾಂಗ್ರೆಸ್ ಗೆ ಸೋಲುಂಟಾಗಲು ಕಾರಣವಾಯಿತು ಎಂದು ಅವರು ಹೇಳಿದರು.
ಸುದ್ದಿ ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ನಗರ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಭಟ್ ಕೊಡೆಂಕೇರಿ, ಶರೀಫ್ ಕಂಠಿ, ಧೀರಾ ಕ್ರಾಸ್ತಾ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…