ಭಗವದ್ಗೀತೆ ಅರ್ಥ ಮಾಡಿಕೊಂಡಾದಾಗ ಯಶಸ್ವೀ ಜೀವನ – ಶ್ರೀಕೃಷ್ಣ ಉಪಾಧ್ಯಾಯ

August 26, 2019
12:30 PM

ಗುತ್ತಿಗಾರು: ದೇಶಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ಶ್ರೀಕೃಷ್ಣ ಪರಮಾತ್ಮ ಈ ಹಿಂದೆಯೇ ಹೇಳಿದ್ದಾನೆ.ಈಗ ಆಗಬೇಕಿರುವುದು  ಅದರ ಪಾಲನೆ ಮತ್ತು ನೆನಪು ಮಾತ್ರಾ. ಭಗವದ್ಗೀತೆ ಓದಿದರೆ ಎಲ್ಲವೂ ಅರ್ಥವಾಗುತ್ತದೆ. ಬದುಕು ಹೇಗೆ ನಡೆಸಬೇಕು ಎಂದೂ ಅದರೊಳಗೆ ಇದೆ. ಹೀಗಾಗಿ ಭಗವದ್ಗೀತೆ ಅರ್ಥಮಾಡಿಕೊಂದರೆ ಯಶಸ್ವೀ ಬದುಕು, ಯಶಸ್ವೀ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.

ಅವರು ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ  ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯಾವಾಗಲೂ ಪರಿಶ್ರಮದ ಬದುಕು ಮಾದರಿಯಾಗಿರುತ್ತದೆ. ಅಂತಹ ಬದುಕು ಎಲ್ಲರದೂ ಆಗಬೇಕು ಎಂದ ಅವರು ಒಡನಾಡಿಯಾದವನಿಗೆ ವ್ಯಕ್ತಿತ್ವವೂ ಅರ್ಥವಾಗುತ್ತದೆ. ಹೀಗಾಗಿ ಶ್ರೀಕೃಷ್ಣನ ಒಡನಾಡಿಯಾದವನಿಗೆ ಅವನ ಬಗ್ಗೆಯೂ ತಿಳಿಯುತ್ತದೆ ಎಂದರು.

ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು. ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ , ದೈಹಿಕ ನಿರ್ದೇಶಕ ರಾಧಾಕೃಷ್ಣ ಏನೆಕಲ್ಲು, ತೀರ್ಥರಾಮ ಕಮಿಲ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಏನೆಕಲ್ಲಿನ ನಾಟಿ ವಿಷ ವೈದ್ಯ ನಾಗೇಶ್ ನೆಕ್ರಾಜೆ, ಶ್ರೀಕಣಿಲ ನಾಟಿ ವೈದ್ಯ ಶ್ರೀನಿವಾಸ ಮುಗುಳಿ , ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಇವರನ್ನು ಸನ್ಮಾನಿಸಲಾಯಿತು.

 

 

ಸಭಾಕಾರ್ಯಕ್ರಮದಲ್ಲಿ ವಿವಿಧ ಸ್ಫರ್ಧೆಗಳ ಬಹುಮಾನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಬಾಂಧವ್ಯ ಗೆಳೆಯರ ಬಳಗದ ಲೋಕೇಶ್ ಕಾಂತಿಲ ಸ್ವಾಗತಿಸಿ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ದಾಮೋದರ ನೇರಳ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror