Advertisement
ಸುದ್ದಿಗಳು

ಭಗವದ್ಗೀತೆ ಅರ್ಥ ಮಾಡಿಕೊಂಡಾದಾಗ ಯಶಸ್ವೀ ಜೀವನ – ಶ್ರೀಕೃಷ್ಣ ಉಪಾಧ್ಯಾಯ

Share

ಗುತ್ತಿಗಾರು: ದೇಶಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ಶ್ರೀಕೃಷ್ಣ ಪರಮಾತ್ಮ ಈ ಹಿಂದೆಯೇ ಹೇಳಿದ್ದಾನೆ.ಈಗ ಆಗಬೇಕಿರುವುದು  ಅದರ ಪಾಲನೆ ಮತ್ತು ನೆನಪು ಮಾತ್ರಾ. ಭಗವದ್ಗೀತೆ ಓದಿದರೆ ಎಲ್ಲವೂ ಅರ್ಥವಾಗುತ್ತದೆ. ಬದುಕು ಹೇಗೆ ನಡೆಸಬೇಕು ಎಂದೂ ಅದರೊಳಗೆ ಇದೆ. ಹೀಗಾಗಿ ಭಗವದ್ಗೀತೆ ಅರ್ಥಮಾಡಿಕೊಂದರೆ ಯಶಸ್ವೀ ಬದುಕು, ಯಶಸ್ವೀ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.

ಅವರು ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ  ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯಾವಾಗಲೂ ಪರಿಶ್ರಮದ ಬದುಕು ಮಾದರಿಯಾಗಿರುತ್ತದೆ. ಅಂತಹ ಬದುಕು ಎಲ್ಲರದೂ ಆಗಬೇಕು ಎಂದ ಅವರು ಒಡನಾಡಿಯಾದವನಿಗೆ ವ್ಯಕ್ತಿತ್ವವೂ ಅರ್ಥವಾಗುತ್ತದೆ. ಹೀಗಾಗಿ ಶ್ರೀಕೃಷ್ಣನ ಒಡನಾಡಿಯಾದವನಿಗೆ ಅವನ ಬಗ್ಗೆಯೂ ತಿಳಿಯುತ್ತದೆ ಎಂದರು.

ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು. ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ , ದೈಹಿಕ ನಿರ್ದೇಶಕ ರಾಧಾಕೃಷ್ಣ ಏನೆಕಲ್ಲು, ತೀರ್ಥರಾಮ ಕಮಿಲ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಏನೆಕಲ್ಲಿನ ನಾಟಿ ವಿಷ ವೈದ್ಯ ನಾಗೇಶ್ ನೆಕ್ರಾಜೆ, ಶ್ರೀಕಣಿಲ ನಾಟಿ ವೈದ್ಯ ಶ್ರೀನಿವಾಸ ಮುಗುಳಿ , ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಇವರನ್ನು ಸನ್ಮಾನಿಸಲಾಯಿತು.

 

 

ಸಭಾಕಾರ್ಯಕ್ರಮದಲ್ಲಿ ವಿವಿಧ ಸ್ಫರ್ಧೆಗಳ ಬಹುಮಾನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಬಾಂಧವ್ಯ ಗೆಳೆಯರ ಬಳಗದ ಲೋಕೇಶ್ ಕಾಂತಿಲ ಸ್ವಾಗತಿಸಿ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ದಾಮೋದರ ನೇರಳ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

5 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

13 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

24 hours ago