Advertisement
ಸುದ್ದಿಗಳು

ಭಗವದ್ಗೀತೆ ಅರ್ಥ ಮಾಡಿಕೊಂಡಾದಾಗ ಯಶಸ್ವೀ ಜೀವನ – ಶ್ರೀಕೃಷ್ಣ ಉಪಾಧ್ಯಾಯ

Share

ಗುತ್ತಿಗಾರು: ದೇಶಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ಶ್ರೀಕೃಷ್ಣ ಪರಮಾತ್ಮ ಈ ಹಿಂದೆಯೇ ಹೇಳಿದ್ದಾನೆ.ಈಗ ಆಗಬೇಕಿರುವುದು  ಅದರ ಪಾಲನೆ ಮತ್ತು ನೆನಪು ಮಾತ್ರಾ. ಭಗವದ್ಗೀತೆ ಓದಿದರೆ ಎಲ್ಲವೂ ಅರ್ಥವಾಗುತ್ತದೆ. ಬದುಕು ಹೇಗೆ ನಡೆಸಬೇಕು ಎಂದೂ ಅದರೊಳಗೆ ಇದೆ. ಹೀಗಾಗಿ ಭಗವದ್ಗೀತೆ ಅರ್ಥಮಾಡಿಕೊಂದರೆ ಯಶಸ್ವೀ ಬದುಕು, ಯಶಸ್ವೀ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.

ಅವರು ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ  ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯಾವಾಗಲೂ ಪರಿಶ್ರಮದ ಬದುಕು ಮಾದರಿಯಾಗಿರುತ್ತದೆ. ಅಂತಹ ಬದುಕು ಎಲ್ಲರದೂ ಆಗಬೇಕು ಎಂದ ಅವರು ಒಡನಾಡಿಯಾದವನಿಗೆ ವ್ಯಕ್ತಿತ್ವವೂ ಅರ್ಥವಾಗುತ್ತದೆ. ಹೀಗಾಗಿ ಶ್ರೀಕೃಷ್ಣನ ಒಡನಾಡಿಯಾದವನಿಗೆ ಅವನ ಬಗ್ಗೆಯೂ ತಿಳಿಯುತ್ತದೆ ಎಂದರು.

ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು. ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ , ದೈಹಿಕ ನಿರ್ದೇಶಕ ರಾಧಾಕೃಷ್ಣ ಏನೆಕಲ್ಲು, ತೀರ್ಥರಾಮ ಕಮಿಲ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಏನೆಕಲ್ಲಿನ ನಾಟಿ ವಿಷ ವೈದ್ಯ ನಾಗೇಶ್ ನೆಕ್ರಾಜೆ, ಶ್ರೀಕಣಿಲ ನಾಟಿ ವೈದ್ಯ ಶ್ರೀನಿವಾಸ ಮುಗುಳಿ , ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಇವರನ್ನು ಸನ್ಮಾನಿಸಲಾಯಿತು.

 

 

ಸಭಾಕಾರ್ಯಕ್ರಮದಲ್ಲಿ ವಿವಿಧ ಸ್ಫರ್ಧೆಗಳ ಬಹುಮಾನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಬಾಂಧವ್ಯ ಗೆಳೆಯರ ಬಳಗದ ಲೋಕೇಶ್ ಕಾಂತಿಲ ಸ್ವಾಗತಿಸಿ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ದಾಮೋದರ ನೇರಳ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

3 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

15 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

15 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

23 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago