Advertisement
ಸುದ್ದಿಗಳು

ಭಗವದ್ಗೀತೆ ಅರ್ಥ ಮಾಡಿಕೊಂಡಾದಾಗ ಯಶಸ್ವೀ ಜೀವನ – ಶ್ರೀಕೃಷ್ಣ ಉಪಾಧ್ಯಾಯ

Share

ಗುತ್ತಿಗಾರು: ದೇಶಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ಶ್ರೀಕೃಷ್ಣ ಪರಮಾತ್ಮ ಈ ಹಿಂದೆಯೇ ಹೇಳಿದ್ದಾನೆ.ಈಗ ಆಗಬೇಕಿರುವುದು  ಅದರ ಪಾಲನೆ ಮತ್ತು ನೆನಪು ಮಾತ್ರಾ. ಭಗವದ್ಗೀತೆ ಓದಿದರೆ ಎಲ್ಲವೂ ಅರ್ಥವಾಗುತ್ತದೆ. ಬದುಕು ಹೇಗೆ ನಡೆಸಬೇಕು ಎಂದೂ ಅದರೊಳಗೆ ಇದೆ. ಹೀಗಾಗಿ ಭಗವದ್ಗೀತೆ ಅರ್ಥಮಾಡಿಕೊಂದರೆ ಯಶಸ್ವೀ ಬದುಕು, ಯಶಸ್ವೀ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.

ಅವರು ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ  ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯಾವಾಗಲೂ ಪರಿಶ್ರಮದ ಬದುಕು ಮಾದರಿಯಾಗಿರುತ್ತದೆ. ಅಂತಹ ಬದುಕು ಎಲ್ಲರದೂ ಆಗಬೇಕು ಎಂದ ಅವರು ಒಡನಾಡಿಯಾದವನಿಗೆ ವ್ಯಕ್ತಿತ್ವವೂ ಅರ್ಥವಾಗುತ್ತದೆ. ಹೀಗಾಗಿ ಶ್ರೀಕೃಷ್ಣನ ಒಡನಾಡಿಯಾದವನಿಗೆ ಅವನ ಬಗ್ಗೆಯೂ ತಿಳಿಯುತ್ತದೆ ಎಂದರು.

ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು. ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ , ದೈಹಿಕ ನಿರ್ದೇಶಕ ರಾಧಾಕೃಷ್ಣ ಏನೆಕಲ್ಲು, ತೀರ್ಥರಾಮ ಕಮಿಲ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಏನೆಕಲ್ಲಿನ ನಾಟಿ ವಿಷ ವೈದ್ಯ ನಾಗೇಶ್ ನೆಕ್ರಾಜೆ, ಶ್ರೀಕಣಿಲ ನಾಟಿ ವೈದ್ಯ ಶ್ರೀನಿವಾಸ ಮುಗುಳಿ , ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಇವರನ್ನು ಸನ್ಮಾನಿಸಲಾಯಿತು.

 

 

ಸಭಾಕಾರ್ಯಕ್ರಮದಲ್ಲಿ ವಿವಿಧ ಸ್ಫರ್ಧೆಗಳ ಬಹುಮಾನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಬಾಂಧವ್ಯ ಗೆಳೆಯರ ಬಳಗದ ಲೋಕೇಶ್ ಕಾಂತಿಲ ಸ್ವಾಗತಿಸಿ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ದಾಮೋದರ ನೇರಳ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

52 minutes ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

3 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

3 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago