Advertisement
ಕಾರ್ಯಕ್ರಮಗಳು

ಭಜನೆಯಿಂದ ಪ್ರೀತಿ-ವಿಶ್ವಾಸದೊಂದಿಗೆ ಸಮಾಜದ ಸಂಘಟನೆ

Share

ಉಜಿರೆ: ಭಜನೆಯಿಂದ ಮಾನಸಿಕ ಏಕಾಗ್ರತೆ ಹೆಚ್ಚಾಗುತ್ತದೆ. ಕೂಡುಕುಟುಂಬದಂತೆ ಪರಸ್ಪರ ಪ್ರೀತಿ-ವಿಶ್ವಾಸದಿಂದ ಸಾಮಾಜಿಕ ಸಂಘಟನೆಯಾಗುತ್ತದೆ ಎಂದು ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರಕುಮಾರ್ ಹೇಳಿದರು.

Advertisement
Advertisement
Advertisement
Advertisement

ಭಾನುವಾರ ಬೆಳ್ತಂಗಡಿಯಲ್ಲಿ ಎಸ್.ಡಿ.ಎಂ.ಕಲಾ ಭವನದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಪ್ರಾಯೋಜಕತ್ವದಲ್ಲಿ ನಡೆದ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆಯಲ್ಲಿ ಅವರು ಸಮಾರೋಪ ಭಾಷಣ ಮಾಡಿ ಬಹುಮಾನ ವಿತರಿಸಿದರು. ಧರ್ಮಸ್ಥಳದಲ್ಲಿ ಪ್ರತಿ ವರ್ಷ ನಡೆಸುವ ಭಜನಾ ತರಬೇತಿ ಕಮ್ಮಟದಿಂದಾಗಿ ಈಗ ಯುವಜನತೆ ಕೂಡಾ ಆಸಕ್ತಿಯಿಂದ ಭಜನೆ ಮಾಡುವುದು ಆಶಾದಾಯಕವಾಗಿದೆ. ಉತ್ತಮ ಸಾಹಿತ್ಯವನ್ನು ಬಳಸಿ ಹೊಸ ಹಾಡುಗಳನ್ನು ರಚಿಸಿ ಸಾಮೂಹಿಕ ಭಜನೆ ಮಾಡಬೇಕು. ಹಿಮ್ಮೇಳ ಇಲ್ಲದೆಯೂ ಭಜನೆ ಹಾಡಬಹುದು ಎಂದು ಅವರು ಸಲಹೆ ನೀಡಿದರು. ಜನಪದ ಶೈಲಿಯ ಗೀತೆಗಳನ್ನು ಸಂಗ್ರಹಿಸಿ ತಾವು “ಬಾಹುಬಲಿ ಗೀತಾಂಜಲಿ”ಯ ಎರಡು ಆವೃತ್ತಿಗಳನ್ನು ಪ್ರಕಟಿಸಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿರುವುದರಿಂದ ಮೂರನೆ ಆವೃತ್ತಿಯನ್ನು ಪ್ರಕಟಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಸ್ಪರ್ಧೆಗಳಲ್ಲಿ ಸೋಲು-ಗೆಲುವು, ಆಶೆ-ನಿರಾಶೆ ಸಹಜವಾದುದು. ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿ ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

Advertisement

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್, ಮಂಗಳೂರಿನ ಪುಷ್ಪರಾಜಜೈನ್, ಬೆಳ್ತಂಗಡಿಯ ಪಾರ್ಶ್ವನಾಥ್‍ಜೈನ್ ಮತ್ತುಉಡುಪಿಯ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿ ಪ್ರತಿ ಮನೆಯಲ್ಲಿಯೂ ರಾಗ-ತಾಳ-ಲಯ ಬದ್ಧವಾಗಿ ಸರಾಗವಾಗಿ ಭಜನೆಯ ನಿನಾದ ಕೇಳಿದರೆ ಭಜನಾ ಸ್ಪರ್ಧೆಯ ಪ್ರಯತ್ನ ಸಾರ್ಥಕವಾಗುತ್ತದೆ. ಭಜನಾ ಸಂಸ್ಕೃತಿ ಉಳಿಸಿ, ಬೆಳೆಸಿದಾಗ ಧರ್ಮ ಪ್ರಭಾವನೆಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಮಂಗಳೂರು ಜೈನ್ ಮಿಲನ್ ಕಾರ್ಯದರ್ಶಿ ಸುಭಾಶ್ಚಂದ್ರಜೈನ್‍ ಧನ್ಯವಾದವಿತ್ತರು.

ಉಜಿರೆಯ ಎಸ್.ಡಿ.ಎಂ. ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕ ಪ್ರೊ.ಸುವೀರ್ ಜೈನ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

24 mins ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

1 hour ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

1 hour ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

15 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

15 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

15 hours ago