Advertisement
ಕಾರ್ಯಕ್ರಮಗಳು

ಭಜನೆಯಿಂದ ಪ್ರೀತಿ-ವಿಶ್ವಾಸದೊಂದಿಗೆ ಸಮಾಜದ ಸಂಘಟನೆ

Share

ಉಜಿರೆ: ಭಜನೆಯಿಂದ ಮಾನಸಿಕ ಏಕಾಗ್ರತೆ ಹೆಚ್ಚಾಗುತ್ತದೆ. ಕೂಡುಕುಟುಂಬದಂತೆ ಪರಸ್ಪರ ಪ್ರೀತಿ-ವಿಶ್ವಾಸದಿಂದ ಸಾಮಾಜಿಕ ಸಂಘಟನೆಯಾಗುತ್ತದೆ ಎಂದು ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರಕುಮಾರ್ ಹೇಳಿದರು.

ಭಾನುವಾರ ಬೆಳ್ತಂಗಡಿಯಲ್ಲಿ ಎಸ್.ಡಿ.ಎಂ.ಕಲಾ ಭವನದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಪ್ರಾಯೋಜಕತ್ವದಲ್ಲಿ ನಡೆದ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆಯಲ್ಲಿ ಅವರು ಸಮಾರೋಪ ಭಾಷಣ ಮಾಡಿ ಬಹುಮಾನ ವಿತರಿಸಿದರು. ಧರ್ಮಸ್ಥಳದಲ್ಲಿ ಪ್ರತಿ ವರ್ಷ ನಡೆಸುವ ಭಜನಾ ತರಬೇತಿ ಕಮ್ಮಟದಿಂದಾಗಿ ಈಗ ಯುವಜನತೆ ಕೂಡಾ ಆಸಕ್ತಿಯಿಂದ ಭಜನೆ ಮಾಡುವುದು ಆಶಾದಾಯಕವಾಗಿದೆ. ಉತ್ತಮ ಸಾಹಿತ್ಯವನ್ನು ಬಳಸಿ ಹೊಸ ಹಾಡುಗಳನ್ನು ರಚಿಸಿ ಸಾಮೂಹಿಕ ಭಜನೆ ಮಾಡಬೇಕು. ಹಿಮ್ಮೇಳ ಇಲ್ಲದೆಯೂ ಭಜನೆ ಹಾಡಬಹುದು ಎಂದು ಅವರು ಸಲಹೆ ನೀಡಿದರು. ಜನಪದ ಶೈಲಿಯ ಗೀತೆಗಳನ್ನು ಸಂಗ್ರಹಿಸಿ ತಾವು “ಬಾಹುಬಲಿ ಗೀತಾಂಜಲಿ”ಯ ಎರಡು ಆವೃತ್ತಿಗಳನ್ನು ಪ್ರಕಟಿಸಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿರುವುದರಿಂದ ಮೂರನೆ ಆವೃತ್ತಿಯನ್ನು ಪ್ರಕಟಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಸ್ಪರ್ಧೆಗಳಲ್ಲಿ ಸೋಲು-ಗೆಲುವು, ಆಶೆ-ನಿರಾಶೆ ಸಹಜವಾದುದು. ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿ ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್, ಮಂಗಳೂರಿನ ಪುಷ್ಪರಾಜಜೈನ್, ಬೆಳ್ತಂಗಡಿಯ ಪಾರ್ಶ್ವನಾಥ್‍ಜೈನ್ ಮತ್ತುಉಡುಪಿಯ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿ ಪ್ರತಿ ಮನೆಯಲ್ಲಿಯೂ ರಾಗ-ತಾಳ-ಲಯ ಬದ್ಧವಾಗಿ ಸರಾಗವಾಗಿ ಭಜನೆಯ ನಿನಾದ ಕೇಳಿದರೆ ಭಜನಾ ಸ್ಪರ್ಧೆಯ ಪ್ರಯತ್ನ ಸಾರ್ಥಕವಾಗುತ್ತದೆ. ಭಜನಾ ಸಂಸ್ಕೃತಿ ಉಳಿಸಿ, ಬೆಳೆಸಿದಾಗ ಧರ್ಮ ಪ್ರಭಾವನೆಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಮಂಗಳೂರು ಜೈನ್ ಮಿಲನ್ ಕಾರ್ಯದರ್ಶಿ ಸುಭಾಶ್ಚಂದ್ರಜೈನ್‍ ಧನ್ಯವಾದವಿತ್ತರು.

ಉಜಿರೆಯ ಎಸ್.ಡಿ.ಎಂ. ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕ ಪ್ರೊ.ಸುವೀರ್ ಜೈನ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

5 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

5 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

6 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

14 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

14 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago