Advertisement
ಕಾರ್ಯಕ್ರಮಗಳು

ಭಜನೆಯಿಂದ ಪ್ರೀತಿ-ವಿಶ್ವಾಸದೊಂದಿಗೆ ಸಮಾಜದ ಸಂಘಟನೆ

Share

ಉಜಿರೆ: ಭಜನೆಯಿಂದ ಮಾನಸಿಕ ಏಕಾಗ್ರತೆ ಹೆಚ್ಚಾಗುತ್ತದೆ. ಕೂಡುಕುಟುಂಬದಂತೆ ಪರಸ್ಪರ ಪ್ರೀತಿ-ವಿಶ್ವಾಸದಿಂದ ಸಾಮಾಜಿಕ ಸಂಘಟನೆಯಾಗುತ್ತದೆ ಎಂದು ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರಕುಮಾರ್ ಹೇಳಿದರು.

ಭಾನುವಾರ ಬೆಳ್ತಂಗಡಿಯಲ್ಲಿ ಎಸ್.ಡಿ.ಎಂ.ಕಲಾ ಭವನದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಪ್ರಾಯೋಜಕತ್ವದಲ್ಲಿ ನಡೆದ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆಯಲ್ಲಿ ಅವರು ಸಮಾರೋಪ ಭಾಷಣ ಮಾಡಿ ಬಹುಮಾನ ವಿತರಿಸಿದರು. ಧರ್ಮಸ್ಥಳದಲ್ಲಿ ಪ್ರತಿ ವರ್ಷ ನಡೆಸುವ ಭಜನಾ ತರಬೇತಿ ಕಮ್ಮಟದಿಂದಾಗಿ ಈಗ ಯುವಜನತೆ ಕೂಡಾ ಆಸಕ್ತಿಯಿಂದ ಭಜನೆ ಮಾಡುವುದು ಆಶಾದಾಯಕವಾಗಿದೆ. ಉತ್ತಮ ಸಾಹಿತ್ಯವನ್ನು ಬಳಸಿ ಹೊಸ ಹಾಡುಗಳನ್ನು ರಚಿಸಿ ಸಾಮೂಹಿಕ ಭಜನೆ ಮಾಡಬೇಕು. ಹಿಮ್ಮೇಳ ಇಲ್ಲದೆಯೂ ಭಜನೆ ಹಾಡಬಹುದು ಎಂದು ಅವರು ಸಲಹೆ ನೀಡಿದರು. ಜನಪದ ಶೈಲಿಯ ಗೀತೆಗಳನ್ನು ಸಂಗ್ರಹಿಸಿ ತಾವು “ಬಾಹುಬಲಿ ಗೀತಾಂಜಲಿ”ಯ ಎರಡು ಆವೃತ್ತಿಗಳನ್ನು ಪ್ರಕಟಿಸಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿರುವುದರಿಂದ ಮೂರನೆ ಆವೃತ್ತಿಯನ್ನು ಪ್ರಕಟಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಸ್ಪರ್ಧೆಗಳಲ್ಲಿ ಸೋಲು-ಗೆಲುವು, ಆಶೆ-ನಿರಾಶೆ ಸಹಜವಾದುದು. ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿ ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್, ಮಂಗಳೂರಿನ ಪುಷ್ಪರಾಜಜೈನ್, ಬೆಳ್ತಂಗಡಿಯ ಪಾರ್ಶ್ವನಾಥ್‍ಜೈನ್ ಮತ್ತುಉಡುಪಿಯ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿ ಪ್ರತಿ ಮನೆಯಲ್ಲಿಯೂ ರಾಗ-ತಾಳ-ಲಯ ಬದ್ಧವಾಗಿ ಸರಾಗವಾಗಿ ಭಜನೆಯ ನಿನಾದ ಕೇಳಿದರೆ ಭಜನಾ ಸ್ಪರ್ಧೆಯ ಪ್ರಯತ್ನ ಸಾರ್ಥಕವಾಗುತ್ತದೆ. ಭಜನಾ ಸಂಸ್ಕೃತಿ ಉಳಿಸಿ, ಬೆಳೆಸಿದಾಗ ಧರ್ಮ ಪ್ರಭಾವನೆಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಮಂಗಳೂರು ಜೈನ್ ಮಿಲನ್ ಕಾರ್ಯದರ್ಶಿ ಸುಭಾಶ್ಚಂದ್ರಜೈನ್‍ ಧನ್ಯವಾದವಿತ್ತರು.

ಉಜಿರೆಯ ಎಸ್.ಡಿ.ಎಂ. ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕ ಪ್ರೊ.ಸುವೀರ್ ಜೈನ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 hour ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 hour ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

2 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

2 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

19 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago