MIRROR FOCUS

ಭವಿಷ್ಯದ ಆಡಳಿತಾತ್ಮಕ “ಯಶಸ್ಸಿಗೆ” ಪ್ರಾಯೋಗಿಕ ಪಾಠ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಡಳಿತ , ಅಧಿಕಾರಿ ಎಂದರೆ ಸುಲಭವಲ್ಲ. ಯಾವ ಹೆಜ್ಜೆ ಇರಿಸಿದರೆ ಏನಾದೀತು ಹಾಗೂ ಏನಾಗಬೇಕು ಎಂಬ ಪಾಠ ಅಗತ್ಯ. ಈ ಪಾಠ ಪ್ರಾಯೋಗಿಕವಾದರೆ ಮಾತ್ರಾ ಯಶಸ್ವಿ ಅಧಿಕಾರಿಯಾಗಲು ಸಾಧ್ಯ. ಉತ್ತಮ ಆಡಳಿತ ನೀಡಲು ಸಾಧ್ಯ. ಸಮಸ್ಯೆ, ಸವಾಲುಗಳನ್ನು ಎದುರಿಸಲು ಸಾಧ್ಯ. ಇಂತಹ ಪಾಠ ನೀಡಿದ್ದು ಪುತ್ತೂರಿನ “ಯಶಸ್” . ಇದು ಹೇಗೆ ? ಈ ಕಡೆಗೆ ನಮ್ಮ ಫೋಕಸ್

Advertisement

 

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಡಳಿತಾತ್ಮಕ  ಹುದ್ದೆಗಳಿಗಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದೆ. ಪಿಯುಸಿ ಹಂತದಿಂದಲೇ ಜಿಲ್ಲೆಯ ವಿವಿದೆಡೆಯ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಆಸಕ್ತರಿಗೆ ತರಬೇತಿ ನೀಡುವ ಕೆಲಸ ಮಾಡುತ್ತಿದೆ. ಇದೀಗ ಪ್ರಾಯೋಗಿಕವಾಗಿಯೂ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿ ಹೇಳುತ್ತಿದೆ. ಹೇಗೆ ಕಾರ್ಯಪ್ರವೃತ್ತವಾಗಬೇಕು ಎಂಬ ಪ್ರಾಯೋಗಿಕ ಪಾಠ ನೀಡಲಾಗುತ್ತದೆ.

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದ ಶ್ರೀ ಸಹಸ್ರಲಿಂಗೇಶ್ವರ ದೇವಾಲಯಕ್ಕೆ ವಿವೇಕಾನಂದ ಅಧ್ಯಯನ ಕೇಂದ್ರ – ಯಶಸ್‍ನ ವಿದ್ಯಾರ್ಥಿಗಳು ಸಂಗಮ ವೀಕ್ಷಣೆ ಮತ್ತು ನೆರೆಪೀಡಿತ ಪ್ರದೇಶಗಳ ಅಧ್ಯಯನದಲ್ಲಿ  ಭಾಗವಹಿಸಿದರು.
ರಾಜ್ಯಾದ್ಯಂತ ಸುರಿದ ಭಾರೀ ಮಳೆಯ ಕಾರಣದಿಂದಾಗಿ ಹಲವು ಜಿಲ್ಲೆಗಳು ನೆರೆಗೆ ತುತ್ತಾಗಿವೆ. ಈ ಹಿನ್ನೆಲೆಯಲ್ಲಿ, ಮುಂದೆ ಆಡಳಿತಾತ್ಮಕ ಹುದ್ದೆಗಳಿಗೆ ಸೇರಲಿಚ್ಛಿಸಿರುವ ಯಶಸ್ ನ ವಿದ್ಯಾರ್ಥಿಗಳಿಂದ ನೆರೆ ಅಧ್ಯಯನ ಮತ್ತು ಇಂತಹ ಕ್ಲಿಷ್ಟಕರ ಸಂದರ್ಭಗಳಲ್ಲಿ ಅಧಿಕಾರಿಯಾಗಿ ಸಮಯೋಚಿತ ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳಬಹುದು ಎಂಬುದರ ಕುರಿತಾಗಿ ಪ್ರಾಯೋಗಿಕ ಪರಿಶೀಲನೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರೆಯ ಮಿತಿಮೀರಿದ ನೀರಿನ ಹರಿವಿನಿಂದಾಗಿ ಜಿಲ್ಲೆಯ ಹಲವು ಕಡೆ ಹಲವು ಸಮಸ್ಯೆಗಳು ಉದ್ಭವಿಸಿ, ಉಲ್ಬಣಗೊಂಡಿವೆ. ಈ ಎರಡು ಜೀವನದಿಗಳ ಸಂಗಮ ಕ್ಷೇತ್ರವಾದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಾದ ಹಾನಿಯ ಕುರಿತು ತಿಳಿಯುವ ಉದ್ದೇಶದಿಂದ ಯಶಸ್ ವಿದ್ಯಾರ್ಥಿ ಸಮೂಹ ಅಲ್ಲಿಗೆ ತೆರಳಿತು.

Advertisement

Advertisement

ಉಪ್ಪಿನಂಗಡಿಯ ನಿವಾಸಿ ಹರೀಶ್ ನಟ್ಟಿಬೈಲು ತಮಗಾದ ತೊಂದರೆಗಳನ್ನು ಸೇರಿದ್ದ ವಿದ್ಯಾರ್ಥಿಗಳಿಗೆ ವಿವರಿಸಿದರು. ಒಟ್ಟು ನಾಲ್ಕರಿಂದ ಐದು ಎಕರೆಯ ತಮ್ಮ ತೋಟದಲ್ಲಿ ಮೂರು ಸಾವಿರದಷ್ಟು ಅಡಿಕೆ ಮರಗಳಿವೆ. ಕುಮಾರಧಾರಾ ನದಿಯ ಅತಿಯಾದ ಹರಿವಿನಿಂದಾಗಿ ಸಂಪೂರ್ಣ ತೋಟಕ್ಕೆ ಹಾನಿಯಾಗಿದೆ. ಅದಲ್ಲದೆ ಸರಕಾರದಿಂದ ಕೊಳೆ ರೋಗಕ್ಕೆ ಪರಿಹಾರ ಸಿಗುವುದನ್ನು ಬಿಟ್ಟರೆ ನೆರೆಪೀಡಿತ ಪ್ರದೇಶವೆಂದು ಯಾವುದೇ ಪರಿಹಾರ ಸಿಗುವುದಿಲ್ಲ. ಇದರಿಂದಾಗಿ ಬಹಳ ನಷ್ಟ ಉಂಟಾಗಿದೆ ಎಂದು ತಿಳಿಸಿದರು.
ಹಾಗೆಯೇ ನೇತ್ರಾವತಿ ನದಿಯ ನೀರಿನ ಮಟ್ಟ ಹೆಚ್ಚಾಗಿ ಅಲ್ಲಿನ ಜನವಸತಿಗಳಿಗೆ ನೀರು ನುಗ್ಗಿದ ಪರಿಣಾಮ ಅನೇಕ ಮನೆಗಳಿಗೆ ತೊಂದರೆ ಉಂಟಾಗಿದೆ. 1974ರ ಮಹಾನೆರೆಯ ನಂತರ ಮೂರನೇ ಬಾರಿಗೆ ಇಂತಹ ಪರಿಸ್ಥಿತಿ ಮರುಕಳಿಸಿದೆ. ನದಿಯ ಆಳ ಕಡಿಮೆಯಾಗಿ, ವಿಸ್ತಾರ ಹೆಚ್ಚಾದ ಕಾರಣ ಈ ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದು ನೆರೆ ಸಂತ್ರಸ್ತ ಜಗದೀಶ ಶೆಟ್ಟಿ ಹೇಳಿದರು.
ವಿದ್ಯಾರ್ಥಿಗಳ ಜೊತೆಗೆ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಉಪ್ಪಿನಂಗಡಿಯ ನಿವಾಸಿ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯ ಯು.ಜಿ.ರಾಧ ನದಿಗಳ ನೀರಿನ ಮಟ್ಟ ಹೆಚ್ಚಾದ್ದರಿಂದ ಉಂಟಾಗುವ ಹಲವಾರು ಸಮಸ್ಯೆಗಳು ಹಾಗೂ ಅದರ ಪರಿಹಾರದ ಕುರಿತು ತಿಳಿಸಿದರು.

ಈ ಎಲ್ಲಾ ಸಮಸ್ಯೆಗಳಿಗೆ ಹೇಗೆ ತಕ್ಷಣದ ಕ್ರಮ ಕೈಗೊಳ್ಳಬಹುದು , ಈಗ ಅಧಿಕಾರಿಗಳು, ಆಡಳಿತ ಯಾವ ಕ್ರಮ ಕೈಗೊಂಡಿತು ಇತ್ಯಾದಿಗಳ ಬಗ್ಗೆ ಅಧ್ಯಯನ ನಡೆಸಿದರು. ತಕ್ಷಣ ಸ್ಪಂದನೆ, ಜನರೊಂದಿಗೆ ಹೇಗೆ ಇಂತಹ ಸಂದರ್ಭದಲ್ಲಿ ವ್ಯವಹರಿಸಬೇಕು ಎಂಬಷ್ಟು ಸೂಕ್ಷ್ಮ ವಿಷಯಗಳ ಕಡೆಗೂ ಗಮನಹರಿಸಲಾಯಿತು.

ಈ ಸಂದರ್ಭದಲ್ಲಿ ಯಶಸ್ ನ ಸಂಯೋಜಕ ಗೋವಿಂದ ರಾಜ ಶರ್ಮ, ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ ವಿಭಾಗ ಮುಖ್ಯಸ್ಥ ಡಾ. ಶೇಖರ್ ಅಯ್ಯರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧಿಕಾರಿ ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ, ವಿವೇಕಾನಂದ ವಸತಿನಿಲಯಗಳ ಮುಖ್ಯ ನಿಲಯಪಾಲಕ ಹರೇಕೃಷ್ಣ, ರೇಡಿಯೋ ಪಾಂಚಜನ್ಯದ ತಾಂತ್ರಿಕ ವಿಭಾಗದ ಪ್ರಶಾಂತ್, ದೇವಾಲಯದ ಸಿಬ್ಬಂದಿ ವರ್ಗ ವಿದ್ಯಾರ್ಥಿನಿ ನಿಲಯ ಪಾಲಕಿಯರಾದ ನಮಿತಾ, ಅಂಜಲಿ, ಚೇತನಾ, ವಿದ್ಯಾರ್ಥಿ ನಿಲಯಪಾಲಕ ಭರತ್ ಹಾಗೂ ಯಶಸ್ ಅಧ್ಯಯನ ಕೇಂದ್ರದ ಐದು ಬ್ಯಾಚಿನ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

ಮುರಳಿಕೃಷ್ಣ ಚಳ್ಳಂಗಾರು

ನಾಗರಿಕ ಸೇವೆಗಳಿಗೆ ಇರುವ ಪರೀಕ್ಷೆಯನ್ನು ಎದುರಿಸುವ ಆಕಾಂಕ್ಷಿಗಳು ಅಧ್ಯಯನದ ಜತೆಗೆ ಪ್ರಾಯೋಗಿಕಾಗಿ ತರಬೇತಿ ಹೊಂದಬೇಕು.ಅದು ಅವರಿಗೆ ಮುಂದಕ್ಕೆ ತುಂಬಾ ಸಹಾಯ ಆಗುತ್ತದೆ.ಇಲಾಖೆ ಭೇಟಿ,ಬಡತನ,ರೈತರ ಸಂಕಷ್ಟ ಅರಿವುದು,ಸಮಸ್ಯೆಗಳಿಗೆ ಹೇಗೆ ಪರಿಹಾರ ಕಂಡುಕೊಳ್ಳುವುದು ಎಂಬ ಬಗ್ಗೆ ನಾವು ತಿಳಿಸುತ್ತೇವೆ. – ಮುರಳಿಕೃಷ್ಣ ಚಳ್ಳಂಗಾರು, ಸಂಚಾಲಕರು, ಯಶಸ್ ವಿಭಾಗ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

2 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

8 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

8 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

9 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

19 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago