ಮಡಿಕೇರಿ :ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷೀಪ್ರಿಯ ಅವರು ಇಂದು ಅತಿಮಳೆಯಾಗುವ ಭಾಗಮಂಡಲಕ್ಕೆ ಭೇಟಿ ನೀಡಿ ಸಂಭವನೀಯ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು.
ಎನ್ಡಿಆರ್ಎಫ್, ಅಗ್ನಿಶಾಮಕ ದಳ, ಗೃಹ ರಕ್ಷಕ ದಳ ಹಾಗೂ ಪೊಲೀಸ್ ತಂಡಗಳಿಂದ ಮಾಹಿತಿ ಪಡೆದರು. ಮಳೆಗಾಲದಲ್ಲಿ ಎದುರಾಗುವ ಸಂಕಷ್ಟದ ಪರಿಸ್ಥಿತಿಯನ್ನು ಗ್ರಾಮಸ್ಥರು ವಿವರಿಸಿದರು. ಮಹಾಮಳೆಯಾದರೆ ಯಾವುದೇ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇದೇ ಸಂದರ್ಭ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯಕ್ಕೆ ತೆರಳಿದ ಡಿಸಿ ಅನೀಸ್ ಕಣ್ಮಣಿ ಜಾಯ್ ಹಾಗೂ ಸಿಇಒ ಕೆ.ಲಕ್ಷೀಪ್ರಿಯ ಅವರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…