ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಟ್ಟು 6 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢ ಪಟ್ಟಿದೆ. ಬೆಳಗ್ಗೆಯವರೆಗೆ 4 ಪ್ರಕರಣಗಳು ಮಾತ್ರವೇ ಕಂಡುಬಂದಿದ್ದರೆ ಸಂಜೆಯ ವೇಳೆಗೆ 2 ಪ್ರಕರಣಗಳು ಪತ್ತೆಯಾಗಿ ಒಟ್ಟು 6 ಪ್ರಕರಣಗಳು ಬೆಳಕಿಗೆ ಬಂದಿದೆ. ಇಂದಿನ ಪ್ರಕರಣದಲ್ಲಿ 4 ಪ್ರಕರಣಗಳು ಮೈಸೂರು ಹಾಗೂ 2 ಪ್ರಕರಣ ದ ಕ ಜಿಲ್ಲೆಯಲ್ಲಿ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 390 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಇದರ ಜೊತೆಗೆ ಲಾಕ್ಡೌನ್ ಮೇ.3 ರವರೆಗೆ ವಿಸ್ತರಣೆ ಮಾಡಿ ಆದೇಶವನ್ನು ಸರಕಾರ ಮಾಡಿದೆ.
ಕೇರಳದಲ್ಲಿ ಭಾನುವಾರ 2 ಹೊಸ ಪ್ರಕರಣ ಪತ್ತೆಯಾಗಿದೆ. ಕಾಸರಗೋಡು ಹಾಗೂ ಕಣ್ಣೂರಿನಲ್ಲಿ ಭಾನುವಾರ ಪತ್ತೆಯಾದ ಪ್ರಕರಣವಾಗಿದೆ. ಈ ಮೂಲಕ ಕೇರಳದಲ್ಲಿ ಒಟ್ಟು 402 ಕೊರೊನಾ ವೈರಸ್ ಸೋಂಕಿತರು ಕಂಡುಬಂದಿದ್ದಾರೆ. ಕೇರಳದಲ್ಲಿ ಎ.20 ರಿಂದ ಕೆಲವು ಪ್ರದೇಶಗಳಲ್ಲಿ ಲಾಕ್ಡೌನ್ ಸಡಿಲವಾಗಲಿದೆ.
ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 1324 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 16,116 ಕ್ಕೆ ಏರಿಕೆಯಾಗಿದೆ. ಭಾನುವಾರ ಒಟ್ಟು 31 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟು 519 ಮಂದಿ ಮೃತಪಟ್ಟಿದ್ದು ಒಟ್ಟು 2302 ಮಂದಿ ಚೇತರಿಕೆ ಕಂಡುಬಂದಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…