ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಟ್ಟು 6 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢ ಪಟ್ಟಿದೆ. ಬೆಳಗ್ಗೆಯವರೆಗೆ 4 ಪ್ರಕರಣಗಳು ಮಾತ್ರವೇ ಕಂಡುಬಂದಿದ್ದರೆ ಸಂಜೆಯ ವೇಳೆಗೆ 2 ಪ್ರಕರಣಗಳು ಪತ್ತೆಯಾಗಿ ಒಟ್ಟು 6 ಪ್ರಕರಣಗಳು ಬೆಳಕಿಗೆ ಬಂದಿದೆ. ಇಂದಿನ ಪ್ರಕರಣದಲ್ಲಿ 4 ಪ್ರಕರಣಗಳು ಮೈಸೂರು ಹಾಗೂ 2 ಪ್ರಕರಣ ದ ಕ ಜಿಲ್ಲೆಯಲ್ಲಿ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 390 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಇದರ ಜೊತೆಗೆ ಲಾಕ್ಡೌನ್ ಮೇ.3 ರವರೆಗೆ ವಿಸ್ತರಣೆ ಮಾಡಿ ಆದೇಶವನ್ನು ಸರಕಾರ ಮಾಡಿದೆ.
ಕೇರಳದಲ್ಲಿ ಭಾನುವಾರ 2 ಹೊಸ ಪ್ರಕರಣ ಪತ್ತೆಯಾಗಿದೆ. ಕಾಸರಗೋಡು ಹಾಗೂ ಕಣ್ಣೂರಿನಲ್ಲಿ ಭಾನುವಾರ ಪತ್ತೆಯಾದ ಪ್ರಕರಣವಾಗಿದೆ. ಈ ಮೂಲಕ ಕೇರಳದಲ್ಲಿ ಒಟ್ಟು 402 ಕೊರೊನಾ ವೈರಸ್ ಸೋಂಕಿತರು ಕಂಡುಬಂದಿದ್ದಾರೆ. ಕೇರಳದಲ್ಲಿ ಎ.20 ರಿಂದ ಕೆಲವು ಪ್ರದೇಶಗಳಲ್ಲಿ ಲಾಕ್ಡೌನ್ ಸಡಿಲವಾಗಲಿದೆ.
ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 1324 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 16,116 ಕ್ಕೆ ಏರಿಕೆಯಾಗಿದೆ. ಭಾನುವಾರ ಒಟ್ಟು 31 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟು 519 ಮಂದಿ ಮೃತಪಟ್ಟಿದ್ದು ಒಟ್ಟು 2302 ಮಂದಿ ಚೇತರಿಕೆ ಕಂಡುಬಂದಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…