Advertisement
MIRROR FOCUS

ಭಾರತಕ್ಕಿಂದು ಹೆಮ್ಮೆಯ ದಿನ : ಚಂದ್ರಯಾನ-2 ನೌಕೆ ಚಂದ್ರನ ಒಡಲು ಸೇರಲಿದೆ ಇಂದು

Share

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಿಸುವ ಭಾರತದ ಬೃಹತ್ ಯೋಜನೆ ಸಾಕಾರಗೊಳ್ಳುವ ಕ್ಷಣ ಸಮೀಪಿಸಿದೆ. ಈ ಮೂಲಕ ಅಮೆರಿಕಾ, ರಷ್ಯಾ, ಚೀನಾ ರಾಷ್ಟ್ರಗಳ ಸಾಧನೆಯನ್ನು ಸರಿಗಟ್ಟಲಿದೆ ಭಾರತ. ಚಂದ್ರಯಾನ-2 ನೌಕೆ ಇಂದು ಚಂದ್ರನ ಒಡಲು ಸೇರಲಿದೆ. ತಡರಾತ್ರಿ  ಚಂದ್ರನಿಗೆ ಸಂಬಂಧಿಸಿದ ಅಮೂಲ್ಯ ಮಾಹಿತಿಗಳು, ಫೋಟೊಗಳು ಲಭ್ಯವಾಗಲಿದೆ.


ಭಾರತದ ವಿಶ್ವದ ಮುಂದೆ ಎದೆಯುಬ್ಬಿಸಿ ನಿಲ್ಲುತ್ತಿದೆ. ಇದೀಗ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಿಸುವ ಭಾರತದ ಬೃಹತ್ ಯೋಜನೆ ಸಾಕಾರಗೊಳ್ಳುವ ಕ್ಷಣ ಸಮೀಪಿಸಿದೆ.  ನಮ್ಮ ಹೆಮ್ಮೆಯ ಚಂದ್ರಯಾನ-2 ನೌಕೆ ಚಂದ್ರನ ಒಡಲು ಇಂದು ಸೇರಲಿದೆ.  ಚಂದ್ರಯಾನ-2 ನೌಕೆ ಚಂದ್ರನ ಮೇಲೆ ಇಂದು ತಡರಾತ್ರಿ 1.30ರಿಂದ 2.30ರ ವೇಳೆಗೆ ಪಾದಾರ್ಪಣೆ ಮಾಡಲಿದೆ. ಈ ಅಪರೂಪದ ಕ್ಷಣಗಳನ್ನು ಇಡೀ ವಿಶ್ವವೇ ಕಾತುರದಿಂದ ಎದುರು ನೋಡುತ್ತಿದೆ. ಬಳಿಕ  ನೌಕೆಯಲ್ಲಿರುವ ಪ್ರಜ್ಞಾನ್ ರೋವರ್ ಬೆಳಗಿನ ಜಾವ  ಹೊರಬರಲಿದೆ. ಬಳಿಕ ಅದು ತನ್ನ ಕಾರ್ಯಾಚರಣೆ ಆರಂಭಿಸಲಿದೆ.

Advertisement

ಭಾರತ ಮಾತ್ರವಲ್ಲದೆ ಇಡೀ ಜಗತ್ತು ಈ ಸಾಧನೆಯ ಕ್ಷಣಕ್ಕೆ ಬೆರಗುಗಣ್ಣಿನಿಂದ ಕಾಯುತ್ತಿದೆ. ಚಂದ್ರ ಉಪಗ್ರಹಕ್ಕೆ ಅಧ್ಯಯನ ನೌಕೆಗಳನ್ನು ಕಳಿಸುವುದು ಇದೇ ಮೊದಲೇನಲ್ಲ. ಬೇರೆ ದೇಶಗಳು ಹಲವು ಬಾರಿ ಈ ಪ್ರಯತ್ನಗಳನ್ನು ನಡೆಸಿವೆ. ಅಲ್ಲಿ ಮಾನವನ ಓಡಾಟವೂ ನಡೆದಿದೆ. ಭಾರತವೂ ಚಂದ್ರಯಾನ-1ರಲ್ಲಿ ಯಶಸ್ವಿ ಪ್ರಯೋಗ ನಡೆಸಿ ಮಾಹಿತಿಗಳನ್ನು ಕಲೆಹಾಕಿದೆ. ಈ ವರೆಗೆ ವಿಶ್ವದ 3 ದೇಶಗಳು ಮಾತ್ರ ಚಂದ್ರನ ಮೇಲೆ ನೌಕೆ ಇಳಿಸಿದ ಇತಿಹಾಸವನ್ನು ಹೊಂದಿದೆ. ಶುಕ್ರವಾರ ಚಂದ್ರಯಾನ-2 ನೌಕೆ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದರೆ ರಷ್ಯಾ, ಅಮೆರಿಕಾ ಹಾಗೂ ಚೀನಾ ಬಳಿಕ ಈ ಸಾಧನೆ ಮಾಡಿದ ನಾಲ್ಕನೆ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ವಿಶೇಷವೆಂದರೆ ಈ ವರೆಗೆ ಯಾವುದೇ ರಾಷ್ಟ್ರಗಳೂ ಕಾಲಿಡದ ಹಾಗೂ ಬಿಸಿಲು ಕಾಣದ ದಕ್ಷಿಣ ಧ್ರುವವನ್ನು ಭಾರತ ಆಯ್ಕೆ ಮಾಡಿಕೊಂಡಿದೆ. ಚಂದ್ರನ ದಕ್ಷಿಣ ಧ್ರುವ ಹೇಗಿದೆ? ಅಲ್ಲಿ ಏನೇನಿವೆ ಎಂಬುದು ಜಗತ್ತಿಗೆ ಗೊತ್ತಿಲ್ಲ. ಅದನ್ನು ನೋಡುವ ಪ್ರಯತ್ನವನ್ನೂ ಮಾಡಿರಲಿಲ್ಲ.  ಹೀಗಾಗಿ ಭಾರತಕ್ಕೆ ಇದು ಹೆಮ್ಮೆ.ಇಸ್ರೋ ಅತ್ಯಂತ ಯಶ್ವಸಿಯಾಗಿ ಇದುವರೆಗೆ ಎಲ್ಲಾ ಕಾರ್ಯಗಳನ್ನು ಮಾಡಿದೆ.

Advertisement

ಸೋಮವಾರ ಚಂದ್ರಯಾನ-2 ನೌಕೆಯಲ್ಲಿನ ಆರ್ಬಿಟರ್ ಹಾಗೂ ವಿಕ್ರಮ್ ಹೆಸರಿನ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು. ಬಳಿಕ ಲ್ಯಾಂಡರ್ ಅನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ ವಿಜ್ಞಾನಿಗಳು ಎರಡು ಬಾರಿ ಕೆಳಕ್ಕೆ ಇಳಿಸಿದ್ದಾರೆ.  ಶುಕ್ರವಾರ ತಡರಾತ್ರಿ 1.30 ರಿಂದ ಲ್ಯಾಂಡನ್ ಅನ್ನು ನಿಧಾನವಾಗಿ ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆ ನಡೆಸಲಾಗುತ್ತದೆ. ಬಳಿಕ ನೌಕೆ ಒಳಗಿನಿಂದ ಪ್ರಜ್ಞಾನ್ ಹೆಸರಿನ ರೋವರ್ ಹೊರಬರುತ್ತದೆ. ಅದು ಒಟ್ಟು 14  ದಿನ ಕ್ರಮಿಸಿ, ಚಂದ್ರನಿಗೆ ಸಂಬಂಧಿಸಿದ ಅಮೂಲ್ಯ ಮಾಹಿತಿಗಳನ್ನು ರೋವರ್ ಸಂಗ್ರಹಿಸಲಿದೆ. ಲ್ಯಾಂಡರ್ ನಿಂದ ಪ್ರತ್ಯೇಕಗೊಂಡಿರುವ ಆರ್ಬಿಟರ್ ಇನ್ನೂ ಒಂದು ವರ್ಷ ಚಂದ್ರನ ಕಕ್ಷೆಯಲ್ಲಿ ಪ್ರದಕ್ಷಿಣೆ ಹಾಕುತ್ತಾ ಅಪರೂಪದ ಫೋಟೋಗಳನ್ನು ಭೂಮಿಗೆ ರವಾನಿಸಲಿದೆ.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago