ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಿಸುವ ಭಾರತದ ಬೃಹತ್ ಯೋಜನೆ ಸಾಕಾರಗೊಳ್ಳುವ ಕ್ಷಣ ಸಮೀಪಿಸಿದೆ. ಈ ಮೂಲಕ ಅಮೆರಿಕಾ, ರಷ್ಯಾ, ಚೀನಾ ರಾಷ್ಟ್ರಗಳ ಸಾಧನೆಯನ್ನು ಸರಿಗಟ್ಟಲಿದೆ ಭಾರತ. ಚಂದ್ರಯಾನ-2 ನೌಕೆ ಇಂದು ಚಂದ್ರನ ಒಡಲು ಸೇರಲಿದೆ. ತಡರಾತ್ರಿ ಚಂದ್ರನಿಗೆ ಸಂಬಂಧಿಸಿದ ಅಮೂಲ್ಯ ಮಾಹಿತಿಗಳು, ಫೋಟೊಗಳು ಲಭ್ಯವಾಗಲಿದೆ.
ಭಾರತದ ವಿಶ್ವದ ಮುಂದೆ ಎದೆಯುಬ್ಬಿಸಿ ನಿಲ್ಲುತ್ತಿದೆ. ಇದೀಗ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಿಸುವ ಭಾರತದ ಬೃಹತ್ ಯೋಜನೆ ಸಾಕಾರಗೊಳ್ಳುವ ಕ್ಷಣ ಸಮೀಪಿಸಿದೆ. ನಮ್ಮ ಹೆಮ್ಮೆಯ ಚಂದ್ರಯಾನ-2 ನೌಕೆ ಚಂದ್ರನ ಒಡಲು ಇಂದು ಸೇರಲಿದೆ. ಚಂದ್ರಯಾನ-2 ನೌಕೆ ಚಂದ್ರನ ಮೇಲೆ ಇಂದು ತಡರಾತ್ರಿ 1.30ರಿಂದ 2.30ರ ವೇಳೆಗೆ ಪಾದಾರ್ಪಣೆ ಮಾಡಲಿದೆ. ಈ ಅಪರೂಪದ ಕ್ಷಣಗಳನ್ನು ಇಡೀ ವಿಶ್ವವೇ ಕಾತುರದಿಂದ ಎದುರು ನೋಡುತ್ತಿದೆ. ಬಳಿಕ ನೌಕೆಯಲ್ಲಿರುವ ಪ್ರಜ್ಞಾನ್ ರೋವರ್ ಬೆಳಗಿನ ಜಾವ ಹೊರಬರಲಿದೆ. ಬಳಿಕ ಅದು ತನ್ನ ಕಾರ್ಯಾಚರಣೆ ಆರಂಭಿಸಲಿದೆ.
ಭಾರತ ಮಾತ್ರವಲ್ಲದೆ ಇಡೀ ಜಗತ್ತು ಈ ಸಾಧನೆಯ ಕ್ಷಣಕ್ಕೆ ಬೆರಗುಗಣ್ಣಿನಿಂದ ಕಾಯುತ್ತಿದೆ. ಚಂದ್ರ ಉಪಗ್ರಹಕ್ಕೆ ಅಧ್ಯಯನ ನೌಕೆಗಳನ್ನು ಕಳಿಸುವುದು ಇದೇ ಮೊದಲೇನಲ್ಲ. ಬೇರೆ ದೇಶಗಳು ಹಲವು ಬಾರಿ ಈ ಪ್ರಯತ್ನಗಳನ್ನು ನಡೆಸಿವೆ. ಅಲ್ಲಿ ಮಾನವನ ಓಡಾಟವೂ ನಡೆದಿದೆ. ಭಾರತವೂ ಚಂದ್ರಯಾನ-1ರಲ್ಲಿ ಯಶಸ್ವಿ ಪ್ರಯೋಗ ನಡೆಸಿ ಮಾಹಿತಿಗಳನ್ನು ಕಲೆಹಾಕಿದೆ. ಈ ವರೆಗೆ ವಿಶ್ವದ 3 ದೇಶಗಳು ಮಾತ್ರ ಚಂದ್ರನ ಮೇಲೆ ನೌಕೆ ಇಳಿಸಿದ ಇತಿಹಾಸವನ್ನು ಹೊಂದಿದೆ. ಶುಕ್ರವಾರ ಚಂದ್ರಯಾನ-2 ನೌಕೆ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದರೆ ರಷ್ಯಾ, ಅಮೆರಿಕಾ ಹಾಗೂ ಚೀನಾ ಬಳಿಕ ಈ ಸಾಧನೆ ಮಾಡಿದ ನಾಲ್ಕನೆ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ವಿಶೇಷವೆಂದರೆ ಈ ವರೆಗೆ ಯಾವುದೇ ರಾಷ್ಟ್ರಗಳೂ ಕಾಲಿಡದ ಹಾಗೂ ಬಿಸಿಲು ಕಾಣದ ದಕ್ಷಿಣ ಧ್ರುವವನ್ನು ಭಾರತ ಆಯ್ಕೆ ಮಾಡಿಕೊಂಡಿದೆ. ಚಂದ್ರನ ದಕ್ಷಿಣ ಧ್ರುವ ಹೇಗಿದೆ? ಅಲ್ಲಿ ಏನೇನಿವೆ ಎಂಬುದು ಜಗತ್ತಿಗೆ ಗೊತ್ತಿಲ್ಲ. ಅದನ್ನು ನೋಡುವ ಪ್ರಯತ್ನವನ್ನೂ ಮಾಡಿರಲಿಲ್ಲ. ಹೀಗಾಗಿ ಭಾರತಕ್ಕೆ ಇದು ಹೆಮ್ಮೆ.ಇಸ್ರೋ ಅತ್ಯಂತ ಯಶ್ವಸಿಯಾಗಿ ಇದುವರೆಗೆ ಎಲ್ಲಾ ಕಾರ್ಯಗಳನ್ನು ಮಾಡಿದೆ.
ಸೋಮವಾರ ಚಂದ್ರಯಾನ-2 ನೌಕೆಯಲ್ಲಿನ ಆರ್ಬಿಟರ್ ಹಾಗೂ ವಿಕ್ರಮ್ ಹೆಸರಿನ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು. ಬಳಿಕ ಲ್ಯಾಂಡರ್ ಅನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ ವಿಜ್ಞಾನಿಗಳು ಎರಡು ಬಾರಿ ಕೆಳಕ್ಕೆ ಇಳಿಸಿದ್ದಾರೆ. ಶುಕ್ರವಾರ ತಡರಾತ್ರಿ 1.30 ರಿಂದ ಲ್ಯಾಂಡನ್ ಅನ್ನು ನಿಧಾನವಾಗಿ ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆ ನಡೆಸಲಾಗುತ್ತದೆ. ಬಳಿಕ ನೌಕೆ ಒಳಗಿನಿಂದ ಪ್ರಜ್ಞಾನ್ ಹೆಸರಿನ ರೋವರ್ ಹೊರಬರುತ್ತದೆ. ಅದು ಒಟ್ಟು 14 ದಿನ ಕ್ರಮಿಸಿ, ಚಂದ್ರನಿಗೆ ಸಂಬಂಧಿಸಿದ ಅಮೂಲ್ಯ ಮಾಹಿತಿಗಳನ್ನು ರೋವರ್ ಸಂಗ್ರಹಿಸಲಿದೆ. ಲ್ಯಾಂಡರ್ ನಿಂದ ಪ್ರತ್ಯೇಕಗೊಂಡಿರುವ ಆರ್ಬಿಟರ್ ಇನ್ನೂ ಒಂದು ವರ್ಷ ಚಂದ್ರನ ಕಕ್ಷೆಯಲ್ಲಿ ಪ್ರದಕ್ಷಿಣೆ ಹಾಕುತ್ತಾ ಅಪರೂಪದ ಫೋಟೋಗಳನ್ನು ಭೂಮಿಗೆ ರವಾನಿಸಲಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…