ಯಾವುದೇ ಸಾಂಕ್ರಾಮಿಕ ಕಾಯಿಲೆಗಳನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಹೀಗಾಗಿ ಕೊರೋನಾ ವೈರಸ್ ತೊಲಗಿಸಲು ಭಾರತಕ್ಕೆ ಸಾಧ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಮೈಕೇಲ್ ರಯಾನ್ ಭರವಸೆ ವ್ಯಕ್ತಪಡಿಸಿದ್ದಾರೆ.
ಕೊರೊನಾ ವೈರಸ್ ಹರಡುವುದು ತಡೆಯುವಲ್ಲಿ ಭಾರತದ ನಡೆಯನ್ನು ವಿಶ್ವವೇ ಸೂಕ್ಷ್ಮವಾಗಿ ಗಮನಿಸುತ್ತಿರುವುದು ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.
ಕಾಯಿಲೆಗಳ ನಿಯಂತ್ರಣ ವಿಚಾರದಲ್ಲಿ ಭಾರತವು ಇದುವರೆಗೆ ಹಿಂದೆ ಬಿದ್ದಿಲ್ಲ. ಈ ಹಿಂದೆ ಪೊಲಿಯೋ ,ಸಿಡುಬು ಸೇರಿದಂತೆ ವಿವಿಧ ರೋಗಗಳ ನಿಯಂತ್ರಣದಲ್ಲಿ ಭಾರತ ಸಮರ್ಥವಾಗಿ ಎದುರಿಸಿದೆ. ಈಗಲೂ ಅದೇ ಹಾದಿಯಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿ ಭರವಸೆ ವ್ಯಕ್ತಪಡಿಸಿದ್ದಾರೆ. ಇತರ ಕೆಲವು ರಾಷ್ಟ್ರಗಳಿಗೆ ನಿಯಂತ್ರಣ ಸಾಧ್ಯವಾಗಿಲ್ಲ. ಆದರೆ ಭಾರತ ಮಾಡಿ ತೋರಿಸಬಹುದು ಎಂದು ಅವರು ಹೇಳಿದ್ದಾರೆ.
ಕೊರೊನಾ ವೈರಸ್ ಹರಡುವುದರ ವಿರುದ್ದ ಸರಿಯಾದ ಕ್ರಮಗಳನ್ನು ಕೈಗೊಳ್ಳದಿದ್ದರೆ ಸೋಂಕು ಹರಡುವ ವೇಗ ಹೆಚ್ಚುತ್ತದೆ ಎಂದು ಎಚ್ಚರಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel