Advertisement
MIRROR FOCUS

ಭಾರತಕ್ಕೆ ರಫೇಲ್ ಯುದ್ಧ ವಿಮಾನ ಹಸ್ತಾಂತರ

Share

ನವದೆಹಲಿ: ಫ್ರಾನ್ಸ್ ನ ಡಸಾಲ್ಟ್ ಏವಿಯೇಶನ್ಸ್ ​ ನಿರ್ಮಿತ ಅತ್ಯಾಧುನಿಕ ರಫೇಲ್ ಯದ್ಧ ವಿಮಾನವನ್ನು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸ್ವೀಕರಿಸಿದರು.

ಮೂರು ದಿನಗಳ ಫ್ರಾನ್ಸ್ ಭೇಟಿಯಲ್ಲಿರುವ ರಾಜನಾಥ್ ಸಿಂಗ್ ರಫೇಲ್ ಯುದ್ಧ ವಿಮಾನ ಸ್ವೀಕರಿಸುವ ಮೊದಲು ಮಾತನಾಡಿ ಇದು ಐತಿಹಾಸಿಕ ದಿನ’ ಎಂದು ಬಣ್ಣಿಸಿದರು. 59 ಸಾವಿರ ಕೋಟಿ ರೂ. ಮೌಲ್ಯದ ಫೈಟರ್ ಜೆಟ್ ಡೀಲ್ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಹೊಸ ಮೈಲಿಗಲ್ಲು ಎಂದು ಅವರು ಈ ಸಂದರ್ಭ ಹೇಳಿದರು.
ಡಸಾಲ್ಟ್​ ಏವಿಯೇಷನ್​ನ ಸಿಇಒ ಎರಿಕ್ ಟ್ರಾಪ್ಪಿಯರ್ ರಫೇಲ್​ ವಿಮಾನವನ್ನು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಹಸ್ತಾಂತರಿಸಿದರು. ದಸರಾ ಹಾಗೂ ಭಾರತೀಯ ವಾಯುಪಡೆ ದಿನವಾದ ಇಂದು (ಅಕ್ಟೋಬರ್-8) ರಾಜನಾಥ್ ಸಿಂಗ್ ವಿಮಾನಕ್ಕೆ ಪೂಜೆ ನೆರವೇರಿಸಿದರು.

ರಫೇಲ್ ಅತ್ಯಾಧುನಿಕ ಯುದ್ಧ ವಿಮಾನವಾಗಿದ್ದು, ಭಾರತದ ಬೇಡಿಕೆಗೆ ಅನುಗುಣವಾಗಿ ವಿಮಾನದಲ್ಲಿ 13 ಮಾರ್ಪಾಡುಗಳು ಮಾಡಲಾಗಿದೆ. ಅತ್ಯಾಧುನಿಕ ಬಿಯಾಂಡ್ ವಿಜುವಲ್ ರೇಂಜ್​ನ ಮೆಟೆರೋ ಕ್ಷಿಪಣಿ ಹಾಗೂ ಸ್ಕಾಲ್ಫ್​ ಕ್ಷಿಪಣಿಗಳೊಂದಿಗೆ ರಫೇಲ್​ ಐಎಎಫ್ ಸೇರಿದೆ. ಅತ್ಯಾಧುನಿಕ ಎಇಎಸ್​ಎ ರೇಡಾರ್ ಹೊಂದಿರುವ ರಫೇಲ್, ಶತ್ರು ವಿಮಾನಗಳನ್ನು ಸುದೂರದಲ್ಲೇ ಪತ್ತೆಹಚ್ಚುತ್ತದೆ. 9,500 ಕೆಜಿ ಬಾಂಬ್​ಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ನ್ಯೂಕ್ಲಿಯರ್ ಬಾಂಬ್​ಗಳನ್ನು ಹೊತ್ತು ಗಂಟೆಗೆ 2000 ಕಿಮೀ ವೇಗದಲ್ಲಿ ಸಾಗುತ್ತದೆ.

ಭಾರತ 59,000 ಕೋಟಿ ರೂ ವೆಚ್ಚದಲ್ಲಿ 36 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಫ್ರಾನ್ಸ್​​ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಔಪಚಾರಿಕವಾಗಿ ಮೊದಲ ವಿಮಾನ ಅಕ್ಟೋಬರ್ 08 (ಇಂದು) ಐಎಎಫ್ ಸೇರಿದೆ. 2020 ಮೇ ಒಳಗೆ ಇನ್ನೂ ಉಳಿದ ವಿಮಾನಗಳು ವಾಯುಪಡೆಗೆ ಸೇರ್ಪಡೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

7 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

11 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

2 days ago