ನವದೆಹಲಿ: ಫ್ರಾನ್ಸ್ ನ ಡಸಾಲ್ಟ್ ಏವಿಯೇಶನ್ಸ್ ನಿರ್ಮಿತ ಅತ್ಯಾಧುನಿಕ ರಫೇಲ್ ಯದ್ಧ ವಿಮಾನವನ್ನು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸ್ವೀಕರಿಸಿದರು.
ಮೂರು ದಿನಗಳ ಫ್ರಾನ್ಸ್ ಭೇಟಿಯಲ್ಲಿರುವ ರಾಜನಾಥ್ ಸಿಂಗ್ ರಫೇಲ್ ಯುದ್ಧ ವಿಮಾನ ಸ್ವೀಕರಿಸುವ ಮೊದಲು ಮಾತನಾಡಿ ಇದು ಐತಿಹಾಸಿಕ ದಿನ’ ಎಂದು ಬಣ್ಣಿಸಿದರು. 59 ಸಾವಿರ ಕೋಟಿ ರೂ. ಮೌಲ್ಯದ ಫೈಟರ್ ಜೆಟ್ ಡೀಲ್ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಹೊಸ ಮೈಲಿಗಲ್ಲು ಎಂದು ಅವರು ಈ ಸಂದರ್ಭ ಹೇಳಿದರು.
ಡಸಾಲ್ಟ್ ಏವಿಯೇಷನ್ನ ಸಿಇಒ ಎರಿಕ್ ಟ್ರಾಪ್ಪಿಯರ್ ರಫೇಲ್ ವಿಮಾನವನ್ನು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಹಸ್ತಾಂತರಿಸಿದರು. ದಸರಾ ಹಾಗೂ ಭಾರತೀಯ ವಾಯುಪಡೆ ದಿನವಾದ ಇಂದು (ಅಕ್ಟೋಬರ್-8) ರಾಜನಾಥ್ ಸಿಂಗ್ ವಿಮಾನಕ್ಕೆ ಪೂಜೆ ನೆರವೇರಿಸಿದರು.
ರಫೇಲ್ ಅತ್ಯಾಧುನಿಕ ಯುದ್ಧ ವಿಮಾನವಾಗಿದ್ದು, ಭಾರತದ ಬೇಡಿಕೆಗೆ ಅನುಗುಣವಾಗಿ ವಿಮಾನದಲ್ಲಿ 13 ಮಾರ್ಪಾಡುಗಳು ಮಾಡಲಾಗಿದೆ. ಅತ್ಯಾಧುನಿಕ ಬಿಯಾಂಡ್ ವಿಜುವಲ್ ರೇಂಜ್ನ ಮೆಟೆರೋ ಕ್ಷಿಪಣಿ ಹಾಗೂ ಸ್ಕಾಲ್ಫ್ ಕ್ಷಿಪಣಿಗಳೊಂದಿಗೆ ರಫೇಲ್ ಐಎಎಫ್ ಸೇರಿದೆ. ಅತ್ಯಾಧುನಿಕ ಎಇಎಸ್ಎ ರೇಡಾರ್ ಹೊಂದಿರುವ ರಫೇಲ್, ಶತ್ರು ವಿಮಾನಗಳನ್ನು ಸುದೂರದಲ್ಲೇ ಪತ್ತೆಹಚ್ಚುತ್ತದೆ. 9,500 ಕೆಜಿ ಬಾಂಬ್ಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ನ್ಯೂಕ್ಲಿಯರ್ ಬಾಂಬ್ಗಳನ್ನು ಹೊತ್ತು ಗಂಟೆಗೆ 2000 ಕಿಮೀ ವೇಗದಲ್ಲಿ ಸಾಗುತ್ತದೆ.
ಭಾರತ 59,000 ಕೋಟಿ ರೂ ವೆಚ್ಚದಲ್ಲಿ 36 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಫ್ರಾನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಔಪಚಾರಿಕವಾಗಿ ಮೊದಲ ವಿಮಾನ ಅಕ್ಟೋಬರ್ 08 (ಇಂದು) ಐಎಎಫ್ ಸೇರಿದೆ. 2020 ಮೇ ಒಳಗೆ ಇನ್ನೂ ಉಳಿದ ವಿಮಾನಗಳು ವಾಯುಪಡೆಗೆ ಸೇರ್ಪಡೆಯಾಗಲಿದೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…