Advertisement
MIRROR FOCUS

ಭಾರತಕ್ಕೆ ರಫೇಲ್ ಯುದ್ಧ ವಿಮಾನ ಹಸ್ತಾಂತರ

Share

ನವದೆಹಲಿ: ಫ್ರಾನ್ಸ್ ನ ಡಸಾಲ್ಟ್ ಏವಿಯೇಶನ್ಸ್ ​ ನಿರ್ಮಿತ ಅತ್ಯಾಧುನಿಕ ರಫೇಲ್ ಯದ್ಧ ವಿಮಾನವನ್ನು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸ್ವೀಕರಿಸಿದರು.

Advertisement
Advertisement

ಮೂರು ದಿನಗಳ ಫ್ರಾನ್ಸ್ ಭೇಟಿಯಲ್ಲಿರುವ ರಾಜನಾಥ್ ಸಿಂಗ್ ರಫೇಲ್ ಯುದ್ಧ ವಿಮಾನ ಸ್ವೀಕರಿಸುವ ಮೊದಲು ಮಾತನಾಡಿ ಇದು ಐತಿಹಾಸಿಕ ದಿನ’ ಎಂದು ಬಣ್ಣಿಸಿದರು. 59 ಸಾವಿರ ಕೋಟಿ ರೂ. ಮೌಲ್ಯದ ಫೈಟರ್ ಜೆಟ್ ಡೀಲ್ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಹೊಸ ಮೈಲಿಗಲ್ಲು ಎಂದು ಅವರು ಈ ಸಂದರ್ಭ ಹೇಳಿದರು.
ಡಸಾಲ್ಟ್​ ಏವಿಯೇಷನ್​ನ ಸಿಇಒ ಎರಿಕ್ ಟ್ರಾಪ್ಪಿಯರ್ ರಫೇಲ್​ ವಿಮಾನವನ್ನು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಹಸ್ತಾಂತರಿಸಿದರು. ದಸರಾ ಹಾಗೂ ಭಾರತೀಯ ವಾಯುಪಡೆ ದಿನವಾದ ಇಂದು (ಅಕ್ಟೋಬರ್-8) ರಾಜನಾಥ್ ಸಿಂಗ್ ವಿಮಾನಕ್ಕೆ ಪೂಜೆ ನೆರವೇರಿಸಿದರು.

Advertisement

ರಫೇಲ್ ಅತ್ಯಾಧುನಿಕ ಯುದ್ಧ ವಿಮಾನವಾಗಿದ್ದು, ಭಾರತದ ಬೇಡಿಕೆಗೆ ಅನುಗುಣವಾಗಿ ವಿಮಾನದಲ್ಲಿ 13 ಮಾರ್ಪಾಡುಗಳು ಮಾಡಲಾಗಿದೆ. ಅತ್ಯಾಧುನಿಕ ಬಿಯಾಂಡ್ ವಿಜುವಲ್ ರೇಂಜ್​ನ ಮೆಟೆರೋ ಕ್ಷಿಪಣಿ ಹಾಗೂ ಸ್ಕಾಲ್ಫ್​ ಕ್ಷಿಪಣಿಗಳೊಂದಿಗೆ ರಫೇಲ್​ ಐಎಎಫ್ ಸೇರಿದೆ. ಅತ್ಯಾಧುನಿಕ ಎಇಎಸ್​ಎ ರೇಡಾರ್ ಹೊಂದಿರುವ ರಫೇಲ್, ಶತ್ರು ವಿಮಾನಗಳನ್ನು ಸುದೂರದಲ್ಲೇ ಪತ್ತೆಹಚ್ಚುತ್ತದೆ. 9,500 ಕೆಜಿ ಬಾಂಬ್​ಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ನ್ಯೂಕ್ಲಿಯರ್ ಬಾಂಬ್​ಗಳನ್ನು ಹೊತ್ತು ಗಂಟೆಗೆ 2000 ಕಿಮೀ ವೇಗದಲ್ಲಿ ಸಾಗುತ್ತದೆ.

Advertisement

ಭಾರತ 59,000 ಕೋಟಿ ರೂ ವೆಚ್ಚದಲ್ಲಿ 36 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಫ್ರಾನ್ಸ್​​ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಔಪಚಾರಿಕವಾಗಿ ಮೊದಲ ವಿಮಾನ ಅಕ್ಟೋಬರ್ 08 (ಇಂದು) ಐಎಎಫ್ ಸೇರಿದೆ. 2020 ಮೇ ಒಳಗೆ ಇನ್ನೂ ಉಳಿದ ವಿಮಾನಗಳು ವಾಯುಪಡೆಗೆ ಸೇರ್ಪಡೆಯಾಗಲಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

32 mins ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

2 hours ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

3 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

4 hours ago

Karnataka Weather | 28-04-2024 | ರಾಜ್ಯದಲ್ಲಿ ಒಣ ಹವೆ | ಕರಾವಳಿ ಜಿಲ್ಲೆಗಳಲ್ಲಿ ಮೋಡ |

ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.

5 hours ago

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

19 hours ago