Advertisement
MIRROR FOCUS

ಭಾರತಕ್ಕೆ ರಫೇಲ್ ಯುದ್ಧ ವಿಮಾನ ಹಸ್ತಾಂತರ

Share

ನವದೆಹಲಿ: ಫ್ರಾನ್ಸ್ ನ ಡಸಾಲ್ಟ್ ಏವಿಯೇಶನ್ಸ್ ​ ನಿರ್ಮಿತ ಅತ್ಯಾಧುನಿಕ ರಫೇಲ್ ಯದ್ಧ ವಿಮಾನವನ್ನು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸ್ವೀಕರಿಸಿದರು.

ಮೂರು ದಿನಗಳ ಫ್ರಾನ್ಸ್ ಭೇಟಿಯಲ್ಲಿರುವ ರಾಜನಾಥ್ ಸಿಂಗ್ ರಫೇಲ್ ಯುದ್ಧ ವಿಮಾನ ಸ್ವೀಕರಿಸುವ ಮೊದಲು ಮಾತನಾಡಿ ಇದು ಐತಿಹಾಸಿಕ ದಿನ’ ಎಂದು ಬಣ್ಣಿಸಿದರು. 59 ಸಾವಿರ ಕೋಟಿ ರೂ. ಮೌಲ್ಯದ ಫೈಟರ್ ಜೆಟ್ ಡೀಲ್ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಹೊಸ ಮೈಲಿಗಲ್ಲು ಎಂದು ಅವರು ಈ ಸಂದರ್ಭ ಹೇಳಿದರು.
ಡಸಾಲ್ಟ್​ ಏವಿಯೇಷನ್​ನ ಸಿಇಒ ಎರಿಕ್ ಟ್ರಾಪ್ಪಿಯರ್ ರಫೇಲ್​ ವಿಮಾನವನ್ನು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಹಸ್ತಾಂತರಿಸಿದರು. ದಸರಾ ಹಾಗೂ ಭಾರತೀಯ ವಾಯುಪಡೆ ದಿನವಾದ ಇಂದು (ಅಕ್ಟೋಬರ್-8) ರಾಜನಾಥ್ ಸಿಂಗ್ ವಿಮಾನಕ್ಕೆ ಪೂಜೆ ನೆರವೇರಿಸಿದರು.

ರಫೇಲ್ ಅತ್ಯಾಧುನಿಕ ಯುದ್ಧ ವಿಮಾನವಾಗಿದ್ದು, ಭಾರತದ ಬೇಡಿಕೆಗೆ ಅನುಗುಣವಾಗಿ ವಿಮಾನದಲ್ಲಿ 13 ಮಾರ್ಪಾಡುಗಳು ಮಾಡಲಾಗಿದೆ. ಅತ್ಯಾಧುನಿಕ ಬಿಯಾಂಡ್ ವಿಜುವಲ್ ರೇಂಜ್​ನ ಮೆಟೆರೋ ಕ್ಷಿಪಣಿ ಹಾಗೂ ಸ್ಕಾಲ್ಫ್​ ಕ್ಷಿಪಣಿಗಳೊಂದಿಗೆ ರಫೇಲ್​ ಐಎಎಫ್ ಸೇರಿದೆ. ಅತ್ಯಾಧುನಿಕ ಎಇಎಸ್​ಎ ರೇಡಾರ್ ಹೊಂದಿರುವ ರಫೇಲ್, ಶತ್ರು ವಿಮಾನಗಳನ್ನು ಸುದೂರದಲ್ಲೇ ಪತ್ತೆಹಚ್ಚುತ್ತದೆ. 9,500 ಕೆಜಿ ಬಾಂಬ್​ಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ನ್ಯೂಕ್ಲಿಯರ್ ಬಾಂಬ್​ಗಳನ್ನು ಹೊತ್ತು ಗಂಟೆಗೆ 2000 ಕಿಮೀ ವೇಗದಲ್ಲಿ ಸಾಗುತ್ತದೆ.

ಭಾರತ 59,000 ಕೋಟಿ ರೂ ವೆಚ್ಚದಲ್ಲಿ 36 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಫ್ರಾನ್ಸ್​​ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಔಪಚಾರಿಕವಾಗಿ ಮೊದಲ ವಿಮಾನ ಅಕ್ಟೋಬರ್ 08 (ಇಂದು) ಐಎಎಫ್ ಸೇರಿದೆ. 2020 ಮೇ ಒಳಗೆ ಇನ್ನೂ ಉಳಿದ ವಿಮಾನಗಳು ವಾಯುಪಡೆಗೆ ಸೇರ್ಪಡೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

2 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

5 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

10 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

20 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

20 hours ago