ಸುದ್ದಿಗಳು

ಭಾರತದಲ್ಲಿ ಕೊರೊನಾ ವೈರಸ್ ಗೆ ಇನ್ನೊಂದು ಬಲಿ | ಸಾವಿನ ಸಂಖ್ಯೆ 7 ಕ್ಕೆ ಏರಿಕೆ | ಪ್ರಪಂಚದಲ್ಲಿ 1 ಬಿಲಿಯನ್ ಜನರು ಲಾಕ್ ಡೌನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಕೊರೊನಾ ವೈರಸ್ ಗೆ ಭಾರತದಲ್ಲಿ ಶನಿವಾರ ರಾತ್ರಿ ಬಿಹಾರದಲ್ಲಿ  38 ವರ್ಷದ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ 6 ಮಂದಿ ಭಾರತದಲ್ಲಿ  ಕೊರೊನಾ ವೈರಸ್ ಗೆ ಬಲಿಯಾದರೆ  ಇಟಲಿಯ ಪ್ರಜೆಯೋರ್ವ ರಾಜಸ್ಥಾನದ ಜೈಪುರದಲ್ಲಿ ಸಾವನ್ನಪ್ಪಿದ ಪ್ರಕರಣವನ್ನೂ ಸೇರಿಸಿ ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

Advertisement

ಮಹಾರಾಷ್ಟ್ರ ಮೂಲದ 63 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ.ಅವರು ಮಾ. 1 ರಂದು ಕೊರೋನಾ ಶಂಕೆಯಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲೂ ಕೊರೊನಾ ವ್ಯಾಪಕವಾಗಿ ಹರಡಿದ್ದು  ಭಾನುವಾರ ಒಂದೇ ದಿನ 10 ಮಂದಿಗೆ ಸೋಂಕು ದೃಢವಾಗಿದ್ದು, ಒಟ್ಟು 74 ಮಂದಿಗೆ ಸೋಂಕು ಇರುವುದು  ದೃಢವಾಗಿದೆ.

ಇದೀಗ  ಬಿಹಾರಾದ 38 ವರ್ಷದ ಯುವಕ ಪಾಟ್ನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ಇವರು ಕತಾರ್ ಪ್ರವಾಸ ಮಾಡಿದ್ದರು.

ಭಾರತದಲ್ಲಿ ಒಟ್ಟು 335 ಮಂದಿಗೆ ಸೋಂಕು ಇರುವುದು  ದೃಢವಾಗಿದೆ.  ಪ್ರಪಂಚದಲ್ಲಿ  ಒಟ್ಟು 3,05,066 ಪ್ರಕರಣ ಪತ್ತೆಯಾಗಿದ್ದರೆ ಒಟ್ಟು 12,987 ಮಂದಿ ಸಾವನ್ನಪ್ಪಿದ್ದಾರೆ.  ಈಚೆಗೆ ವಾರದಿಂದ ಪ್ರಪಂಚದಲ್ಲಿ ಪ್ರತೀ ದಿನ 30,000 ಪ್ರಕರಣ ಹೆಚ್ಚಾಗುತ್ತಿದೆ. ಕೊರೊನಾ ಕಾರಣದಿಂದ 1 ಬಿಲಿಯನ್ ಜನರು ಲಾಕ್ ಡೌನ್ ಆಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Advertisement

ಚೀನಾದಲ್ಲಿ  ವೈರಸ್ ಹರಡುವುದು  ಕಡಿಮೆಯಾಗಿದೆ ಎಂದು ಚೀನಾ ಘೋಷಿಸಿಕೊಂಡ ಬೆನ್ನಲ್ಲೇ ಭಾನುವಾರದಂದು  46 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕುವೈಟ್ ನಲ್ಲಿ ಕರ್ಫ್ಯೂ ಘೋಷಣೆ ಮಾಡಲಾಗಿದ್ದರೆ , ಇಟಲಿಯಲ್ಲಿ  ನಿನ್ನೆ ಒಂದೇ ದಿನ 793 ಮಂದಿ ಸಾವನ್ನಪ್ಪಿದ್ದಾರೆ , ಇಲ್ಲಿ ಕೊರೊನಾ ಪ್ರಕರಣದಲ್ಲಿ  ಏರಿಕೆ ಕಂಡುಬರುತ್ತಿದೆ.  ಯು ಎಸ್ , ಸ್ಪೇನ್ , ಜರ್ಮನಿ , ಫ್ರಾನ್ಸ್ , ಯು ಕೆ , ಸ್ವಿಜರ್ ಲ್ಯಂಡ್ ನಲ್ಲಿ  ಕೊರೊನಾ ಪ್ರಕರಣ ಹೆಚ್ಚುತ್ತಿದೆ.

Advertisement

 

 

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

2 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

9 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

10 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

18 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

19 hours ago