Advertisement
ಸುದ್ದಿಗಳು

ಭಾರತದಲ್ಲಿ ಕೊರೊನಾ ವೈರಸ್ ಗೆ ಇನ್ನೊಂದು ಬಲಿ | ಸಾವಿನ ಸಂಖ್ಯೆ 7 ಕ್ಕೆ ಏರಿಕೆ | ಪ್ರಪಂಚದಲ್ಲಿ 1 ಬಿಲಿಯನ್ ಜನರು ಲಾಕ್ ಡೌನ್

Share

ಮಂಗಳೂರು: ಕೊರೊನಾ ವೈರಸ್ ಗೆ ಭಾರತದಲ್ಲಿ ಶನಿವಾರ ರಾತ್ರಿ ಬಿಹಾರದಲ್ಲಿ  38 ವರ್ಷದ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ 6 ಮಂದಿ ಭಾರತದಲ್ಲಿ  ಕೊರೊನಾ ವೈರಸ್ ಗೆ ಬಲಿಯಾದರೆ  ಇಟಲಿಯ ಪ್ರಜೆಯೋರ್ವ ರಾಜಸ್ಥಾನದ ಜೈಪುರದಲ್ಲಿ ಸಾವನ್ನಪ್ಪಿದ ಪ್ರಕರಣವನ್ನೂ ಸೇರಿಸಿ ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
Advertisement

ಮಹಾರಾಷ್ಟ್ರ ಮೂಲದ 63 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ.ಅವರು ಮಾ. 1 ರಂದು ಕೊರೋನಾ ಶಂಕೆಯಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲೂ ಕೊರೊನಾ ವ್ಯಾಪಕವಾಗಿ ಹರಡಿದ್ದು  ಭಾನುವಾರ ಒಂದೇ ದಿನ 10 ಮಂದಿಗೆ ಸೋಂಕು ದೃಢವಾಗಿದ್ದು, ಒಟ್ಟು 74 ಮಂದಿಗೆ ಸೋಂಕು ಇರುವುದು  ದೃಢವಾಗಿದೆ.

Advertisement

ಇದೀಗ  ಬಿಹಾರಾದ 38 ವರ್ಷದ ಯುವಕ ಪಾಟ್ನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ಇವರು ಕತಾರ್ ಪ್ರವಾಸ ಮಾಡಿದ್ದರು.

ಭಾರತದಲ್ಲಿ ಒಟ್ಟು 335 ಮಂದಿಗೆ ಸೋಂಕು ಇರುವುದು  ದೃಢವಾಗಿದೆ.  ಪ್ರಪಂಚದಲ್ಲಿ  ಒಟ್ಟು 3,05,066 ಪ್ರಕರಣ ಪತ್ತೆಯಾಗಿದ್ದರೆ ಒಟ್ಟು 12,987 ಮಂದಿ ಸಾವನ್ನಪ್ಪಿದ್ದಾರೆ.  ಈಚೆಗೆ ವಾರದಿಂದ ಪ್ರಪಂಚದಲ್ಲಿ ಪ್ರತೀ ದಿನ 30,000 ಪ್ರಕರಣ ಹೆಚ್ಚಾಗುತ್ತಿದೆ. ಕೊರೊನಾ ಕಾರಣದಿಂದ 1 ಬಿಲಿಯನ್ ಜನರು ಲಾಕ್ ಡೌನ್ ಆಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Advertisement

ಚೀನಾದಲ್ಲಿ  ವೈರಸ್ ಹರಡುವುದು  ಕಡಿಮೆಯಾಗಿದೆ ಎಂದು ಚೀನಾ ಘೋಷಿಸಿಕೊಂಡ ಬೆನ್ನಲ್ಲೇ ಭಾನುವಾರದಂದು  46 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕುವೈಟ್ ನಲ್ಲಿ ಕರ್ಫ್ಯೂ ಘೋಷಣೆ ಮಾಡಲಾಗಿದ್ದರೆ , ಇಟಲಿಯಲ್ಲಿ  ನಿನ್ನೆ ಒಂದೇ ದಿನ 793 ಮಂದಿ ಸಾವನ್ನಪ್ಪಿದ್ದಾರೆ , ಇಲ್ಲಿ ಕೊರೊನಾ ಪ್ರಕರಣದಲ್ಲಿ  ಏರಿಕೆ ಕಂಡುಬರುತ್ತಿದೆ.  ಯು ಎಸ್ , ಸ್ಪೇನ್ , ಜರ್ಮನಿ , ಫ್ರಾನ್ಸ್ , ಯು ಕೆ , ಸ್ವಿಜರ್ ಲ್ಯಂಡ್ ನಲ್ಲಿ  ಕೊರೊನಾ ಪ್ರಕರಣ ಹೆಚ್ಚುತ್ತಿದೆ.

 

Advertisement

 

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

9 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

9 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

9 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

17 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

18 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

19 hours ago