Advertisement
ಸುದ್ದಿಗಳು

ಭಾರತದಲ್ಲಿ ಕೊರೊನಾ ವೈರಸ್ ಗೆ ಇನ್ನೊಂದು ಬಲಿ | ಸಾವಿನ ಸಂಖ್ಯೆ 7 ಕ್ಕೆ ಏರಿಕೆ | ಪ್ರಪಂಚದಲ್ಲಿ 1 ಬಿಲಿಯನ್ ಜನರು ಲಾಕ್ ಡೌನ್

Share

ಮಂಗಳೂರು: ಕೊರೊನಾ ವೈರಸ್ ಗೆ ಭಾರತದಲ್ಲಿ ಶನಿವಾರ ರಾತ್ರಿ ಬಿಹಾರದಲ್ಲಿ  38 ವರ್ಷದ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ 6 ಮಂದಿ ಭಾರತದಲ್ಲಿ  ಕೊರೊನಾ ವೈರಸ್ ಗೆ ಬಲಿಯಾದರೆ  ಇಟಲಿಯ ಪ್ರಜೆಯೋರ್ವ ರಾಜಸ್ಥಾನದ ಜೈಪುರದಲ್ಲಿ ಸಾವನ್ನಪ್ಪಿದ ಪ್ರಕರಣವನ್ನೂ ಸೇರಿಸಿ ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ಮೂಲದ 63 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ.ಅವರು ಮಾ. 1 ರಂದು ಕೊರೋನಾ ಶಂಕೆಯಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲೂ ಕೊರೊನಾ ವ್ಯಾಪಕವಾಗಿ ಹರಡಿದ್ದು  ಭಾನುವಾರ ಒಂದೇ ದಿನ 10 ಮಂದಿಗೆ ಸೋಂಕು ದೃಢವಾಗಿದ್ದು, ಒಟ್ಟು 74 ಮಂದಿಗೆ ಸೋಂಕು ಇರುವುದು  ದೃಢವಾಗಿದೆ.

ಇದೀಗ  ಬಿಹಾರಾದ 38 ವರ್ಷದ ಯುವಕ ಪಾಟ್ನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ಇವರು ಕತಾರ್ ಪ್ರವಾಸ ಮಾಡಿದ್ದರು.

ಭಾರತದಲ್ಲಿ ಒಟ್ಟು 335 ಮಂದಿಗೆ ಸೋಂಕು ಇರುವುದು  ದೃಢವಾಗಿದೆ.  ಪ್ರಪಂಚದಲ್ಲಿ  ಒಟ್ಟು 3,05,066 ಪ್ರಕರಣ ಪತ್ತೆಯಾಗಿದ್ದರೆ ಒಟ್ಟು 12,987 ಮಂದಿ ಸಾವನ್ನಪ್ಪಿದ್ದಾರೆ.  ಈಚೆಗೆ ವಾರದಿಂದ ಪ್ರಪಂಚದಲ್ಲಿ ಪ್ರತೀ ದಿನ 30,000 ಪ್ರಕರಣ ಹೆಚ್ಚಾಗುತ್ತಿದೆ. ಕೊರೊನಾ ಕಾರಣದಿಂದ 1 ಬಿಲಿಯನ್ ಜನರು ಲಾಕ್ ಡೌನ್ ಆಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಚೀನಾದಲ್ಲಿ  ವೈರಸ್ ಹರಡುವುದು  ಕಡಿಮೆಯಾಗಿದೆ ಎಂದು ಚೀನಾ ಘೋಷಿಸಿಕೊಂಡ ಬೆನ್ನಲ್ಲೇ ಭಾನುವಾರದಂದು  46 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕುವೈಟ್ ನಲ್ಲಿ ಕರ್ಫ್ಯೂ ಘೋಷಣೆ ಮಾಡಲಾಗಿದ್ದರೆ , ಇಟಲಿಯಲ್ಲಿ  ನಿನ್ನೆ ಒಂದೇ ದಿನ 793 ಮಂದಿ ಸಾವನ್ನಪ್ಪಿದ್ದಾರೆ , ಇಲ್ಲಿ ಕೊರೊನಾ ಪ್ರಕರಣದಲ್ಲಿ  ಏರಿಕೆ ಕಂಡುಬರುತ್ತಿದೆ.  ಯು ಎಸ್ , ಸ್ಪೇನ್ , ಜರ್ಮನಿ , ಫ್ರಾನ್ಸ್ , ಯು ಕೆ , ಸ್ವಿಜರ್ ಲ್ಯಂಡ್ ನಲ್ಲಿ  ಕೊರೊನಾ ಪ್ರಕರಣ ಹೆಚ್ಚುತ್ತಿದೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago