Advertisement
ಸುದ್ದಿಗಳು

ಭಾರತದಲ್ಲಿ ಕೊರೊನಾ ವೈರಸ್ ಗೆ ಇನ್ನೊಂದು ಬಲಿ | ಸಾವಿನ ಸಂಖ್ಯೆ 7 ಕ್ಕೆ ಏರಿಕೆ | ಪ್ರಪಂಚದಲ್ಲಿ 1 ಬಿಲಿಯನ್ ಜನರು ಲಾಕ್ ಡೌನ್

Share

ಮಂಗಳೂರು: ಕೊರೊನಾ ವೈರಸ್ ಗೆ ಭಾರತದಲ್ಲಿ ಶನಿವಾರ ರಾತ್ರಿ ಬಿಹಾರದಲ್ಲಿ  38 ವರ್ಷದ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ 6 ಮಂದಿ ಭಾರತದಲ್ಲಿ  ಕೊರೊನಾ ವೈರಸ್ ಗೆ ಬಲಿಯಾದರೆ  ಇಟಲಿಯ ಪ್ರಜೆಯೋರ್ವ ರಾಜಸ್ಥಾನದ ಜೈಪುರದಲ್ಲಿ ಸಾವನ್ನಪ್ಪಿದ ಪ್ರಕರಣವನ್ನೂ ಸೇರಿಸಿ ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ಮೂಲದ 63 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ.ಅವರು ಮಾ. 1 ರಂದು ಕೊರೋನಾ ಶಂಕೆಯಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲೂ ಕೊರೊನಾ ವ್ಯಾಪಕವಾಗಿ ಹರಡಿದ್ದು  ಭಾನುವಾರ ಒಂದೇ ದಿನ 10 ಮಂದಿಗೆ ಸೋಂಕು ದೃಢವಾಗಿದ್ದು, ಒಟ್ಟು 74 ಮಂದಿಗೆ ಸೋಂಕು ಇರುವುದು  ದೃಢವಾಗಿದೆ.

ಇದೀಗ  ಬಿಹಾರಾದ 38 ವರ್ಷದ ಯುವಕ ಪಾಟ್ನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ಇವರು ಕತಾರ್ ಪ್ರವಾಸ ಮಾಡಿದ್ದರು.

ಭಾರತದಲ್ಲಿ ಒಟ್ಟು 335 ಮಂದಿಗೆ ಸೋಂಕು ಇರುವುದು  ದೃಢವಾಗಿದೆ.  ಪ್ರಪಂಚದಲ್ಲಿ  ಒಟ್ಟು 3,05,066 ಪ್ರಕರಣ ಪತ್ತೆಯಾಗಿದ್ದರೆ ಒಟ್ಟು 12,987 ಮಂದಿ ಸಾವನ್ನಪ್ಪಿದ್ದಾರೆ.  ಈಚೆಗೆ ವಾರದಿಂದ ಪ್ರಪಂಚದಲ್ಲಿ ಪ್ರತೀ ದಿನ 30,000 ಪ್ರಕರಣ ಹೆಚ್ಚಾಗುತ್ತಿದೆ. ಕೊರೊನಾ ಕಾರಣದಿಂದ 1 ಬಿಲಿಯನ್ ಜನರು ಲಾಕ್ ಡೌನ್ ಆಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಚೀನಾದಲ್ಲಿ  ವೈರಸ್ ಹರಡುವುದು  ಕಡಿಮೆಯಾಗಿದೆ ಎಂದು ಚೀನಾ ಘೋಷಿಸಿಕೊಂಡ ಬೆನ್ನಲ್ಲೇ ಭಾನುವಾರದಂದು  46 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕುವೈಟ್ ನಲ್ಲಿ ಕರ್ಫ್ಯೂ ಘೋಷಣೆ ಮಾಡಲಾಗಿದ್ದರೆ , ಇಟಲಿಯಲ್ಲಿ  ನಿನ್ನೆ ಒಂದೇ ದಿನ 793 ಮಂದಿ ಸಾವನ್ನಪ್ಪಿದ್ದಾರೆ , ಇಲ್ಲಿ ಕೊರೊನಾ ಪ್ರಕರಣದಲ್ಲಿ  ಏರಿಕೆ ಕಂಡುಬರುತ್ತಿದೆ.  ಯು ಎಸ್ , ಸ್ಪೇನ್ , ಜರ್ಮನಿ , ಫ್ರಾನ್ಸ್ , ಯು ಕೆ , ಸ್ವಿಜರ್ ಲ್ಯಂಡ್ ನಲ್ಲಿ  ಕೊರೊನಾ ಪ್ರಕರಣ ಹೆಚ್ಚುತ್ತಿದೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

24 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago