Advertisement
ರಾಷ್ಟ್ರೀಯ

ಭಾರತದ ಮೊದಲ ಮಂತ್ರವೇ ಆತ್ಮನಿರ್ಭರ -ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿ :ಯುವಶಕ್ತಿಯನ್ನು ಹೊಂದಿರುವ ಭಾರತದ ಮೊದಲ ಮಂತ್ರ ಆತ್ಮನಿರ್ಭರ ವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೆಂಪುಕೋಟೆಯಲ್ಲಿ  74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.  ಭಾರತ ಸಾಮೂಹಿಕ ಶಕ್ತಿಯನ್ನು  ಹೊಂದಿದೆ. ಎಲ್ಲಾ ಕ್ಷೇತ್ರದಲ್ಲೂ, ಎಲ್ಲಾ ಸಂಗತಿಗಳಲ್ಲೂ ಭಾರತದ ಸಮೂಹ ಶಕ್ತಿ ಜಾಗೃತಗೊಳಿಸಿದೆ.  ಕೊರೋನಾ ವಿರುದ್ಧ ಸಾಮೂಹಿಕ ಶಕ್ತಿ ತೋರಿದೆ. ಪ್ರತಿಯೊಬ್ಬ ಭಾರತೀಯರು ಕೊರೋನಾ ಸಂದರ್ಭದಲ್ಲಿ ಆತ್ಮ ನಿರ್ಭರ ಸಂಕಲ್ಪ ಕೈಗೊಳ್ಳಲಾಗಿದೆ. ಭಾರತ ಆತ್ಮನಿರ್ಭರ ಆಗಲೇಬೇಕಿದೆ. ಭಾರತ ಒಂದು ಬಾರಿ ನಿರ್ಧಾರ ಕೈಗೊಂಡರೇ, ಅದನ್ನು ಸಾಧಿಸಿಯೇ ತೀರುತ್ತದೆ ಎಂದು  ಹೇಳಿದರು.ಆತ್ಮನಿರ್ಭರ ಭಾರತ ನಮಗೆಲ್ಲರಿಗೂ ದೃಢ ಸಂಕಲ್ಪವಾಗಬೇಕು. ಆತ್ಮನಿರ್ಭರ ಭಾರತವನ್ನು ನಮ್ಮ ರೈತರು ಸಾಬೀತುಪಡಿಸಿದ್ದಾರೆ ಎಂದು ಪ್ರಧಾನಿಗಳು ಕೊಂಡಾಡಿದರು.

ಕೊರೋನಾ ಸಂಕಷ್ಟ  ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ. ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೊರೋನಾ ವಾರಿಯರ್ಸ್ ಸೇವೆ ಬಹುಮುಖ್ಯವಾಗಿದೆ ಎಂದು ವಾರಿಯರ್ಸ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ನೆನಪಿಸಿದರು.

ಚೀನೀ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಇತರ ದೇಶಗಳಿಂದ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಇನ್ನು ಮುಂದೆ ನಾವು ನಮ್ಮ ಸ್ವಂತ ಸರಕುಗಳನ್ನು ನಾವೇ ತಯಾರಿಸಿಕೊಳ್ಳೋಣ. ಭಾರತವು ಗುಣಮಟ್ಟದ ಸರಕುಗಳ ಆಶ್ರಯ ತಾಣವೆಂದು ಮತ್ತೊಮ್ಮೆ ಸಾಬೀತುಪಡಿಸೋಣ. ಒಂದು ಕಾಲದಲ್ಲಿ ಭಾರತೀಯ ಸರಕುಗಳನ್ನು ಪ್ರಪಂಚದಾದ್ಯಂತ ಗುಣಮಟ್ಟದ ವಸ್ತುಗಳೆಂದು ಪೂಜಿಸಲಾಗುತ್ತಿತ್ತು. ಭಾರತೀಯ ಸರಕುಗಳಿಗೆ ಹಿಂದಿನ ವೈಭವವನ್ನು ತರಲು ನಾವು ಮತ್ತೆ ಪ್ರಯತ್ನಿಸೋಣ. ಕೊರೋನಾ ಕಷ್ಟದ ಸಮಯದಲ್ಲೂ ಹೊಸ ಹಾದಿಯನ್ನು ಹುಡುಕೋಣ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

2 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

9 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

20 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago