Advertisement
ರಾಷ್ಟ್ರೀಯ

ಭಾರತದ ಮೊದಲ ಮಂತ್ರವೇ ಆತ್ಮನಿರ್ಭರ -ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿ :ಯುವಶಕ್ತಿಯನ್ನು ಹೊಂದಿರುವ ಭಾರತದ ಮೊದಲ ಮಂತ್ರ ಆತ್ಮನಿರ್ಭರ ವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೆಂಪುಕೋಟೆಯಲ್ಲಿ  74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.  ಭಾರತ ಸಾಮೂಹಿಕ ಶಕ್ತಿಯನ್ನು  ಹೊಂದಿದೆ. ಎಲ್ಲಾ ಕ್ಷೇತ್ರದಲ್ಲೂ, ಎಲ್ಲಾ ಸಂಗತಿಗಳಲ್ಲೂ ಭಾರತದ ಸಮೂಹ ಶಕ್ತಿ ಜಾಗೃತಗೊಳಿಸಿದೆ.  ಕೊರೋನಾ ವಿರುದ್ಧ ಸಾಮೂಹಿಕ ಶಕ್ತಿ ತೋರಿದೆ. ಪ್ರತಿಯೊಬ್ಬ ಭಾರತೀಯರು ಕೊರೋನಾ ಸಂದರ್ಭದಲ್ಲಿ ಆತ್ಮ ನಿರ್ಭರ ಸಂಕಲ್ಪ ಕೈಗೊಳ್ಳಲಾಗಿದೆ. ಭಾರತ ಆತ್ಮನಿರ್ಭರ ಆಗಲೇಬೇಕಿದೆ. ಭಾರತ ಒಂದು ಬಾರಿ ನಿರ್ಧಾರ ಕೈಗೊಂಡರೇ, ಅದನ್ನು ಸಾಧಿಸಿಯೇ ತೀರುತ್ತದೆ ಎಂದು  ಹೇಳಿದರು.ಆತ್ಮನಿರ್ಭರ ಭಾರತ ನಮಗೆಲ್ಲರಿಗೂ ದೃಢ ಸಂಕಲ್ಪವಾಗಬೇಕು. ಆತ್ಮನಿರ್ಭರ ಭಾರತವನ್ನು ನಮ್ಮ ರೈತರು ಸಾಬೀತುಪಡಿಸಿದ್ದಾರೆ ಎಂದು ಪ್ರಧಾನಿಗಳು ಕೊಂಡಾಡಿದರು.

ಕೊರೋನಾ ಸಂಕಷ್ಟ  ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ. ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೊರೋನಾ ವಾರಿಯರ್ಸ್ ಸೇವೆ ಬಹುಮುಖ್ಯವಾಗಿದೆ ಎಂದು ವಾರಿಯರ್ಸ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ನೆನಪಿಸಿದರು.

ಚೀನೀ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಇತರ ದೇಶಗಳಿಂದ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಇನ್ನು ಮುಂದೆ ನಾವು ನಮ್ಮ ಸ್ವಂತ ಸರಕುಗಳನ್ನು ನಾವೇ ತಯಾರಿಸಿಕೊಳ್ಳೋಣ. ಭಾರತವು ಗುಣಮಟ್ಟದ ಸರಕುಗಳ ಆಶ್ರಯ ತಾಣವೆಂದು ಮತ್ತೊಮ್ಮೆ ಸಾಬೀತುಪಡಿಸೋಣ. ಒಂದು ಕಾಲದಲ್ಲಿ ಭಾರತೀಯ ಸರಕುಗಳನ್ನು ಪ್ರಪಂಚದಾದ್ಯಂತ ಗುಣಮಟ್ಟದ ವಸ್ತುಗಳೆಂದು ಪೂಜಿಸಲಾಗುತ್ತಿತ್ತು. ಭಾರತೀಯ ಸರಕುಗಳಿಗೆ ಹಿಂದಿನ ವೈಭವವನ್ನು ತರಲು ನಾವು ಮತ್ತೆ ಪ್ರಯತ್ನಿಸೋಣ. ಕೊರೋನಾ ಕಷ್ಟದ ಸಮಯದಲ್ಲೂ ಹೊಸ ಹಾದಿಯನ್ನು ಹುಡುಕೋಣ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

12 minutes ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

27 minutes ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

8 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

9 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

11 hours ago