ನವದೆಹಲಿ :ಯುವಶಕ್ತಿಯನ್ನು ಹೊಂದಿರುವ ಭಾರತದ ಮೊದಲ ಮಂತ್ರ ಆತ್ಮನಿರ್ಭರ ವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕೆಂಪುಕೋಟೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ಭಾರತ ಸಾಮೂಹಿಕ ಶಕ್ತಿಯನ್ನು ಹೊಂದಿದೆ. ಎಲ್ಲಾ ಕ್ಷೇತ್ರದಲ್ಲೂ, ಎಲ್ಲಾ ಸಂಗತಿಗಳಲ್ಲೂ ಭಾರತದ ಸಮೂಹ ಶಕ್ತಿ ಜಾಗೃತಗೊಳಿಸಿದೆ. ಕೊರೋನಾ ವಿರುದ್ಧ ಸಾಮೂಹಿಕ ಶಕ್ತಿ ತೋರಿದೆ. ಪ್ರತಿಯೊಬ್ಬ ಭಾರತೀಯರು ಕೊರೋನಾ ಸಂದರ್ಭದಲ್ಲಿ ಆತ್ಮ ನಿರ್ಭರ ಸಂಕಲ್ಪ ಕೈಗೊಳ್ಳಲಾಗಿದೆ. ಭಾರತ ಆತ್ಮನಿರ್ಭರ ಆಗಲೇಬೇಕಿದೆ. ಭಾರತ ಒಂದು ಬಾರಿ ನಿರ್ಧಾರ ಕೈಗೊಂಡರೇ, ಅದನ್ನು ಸಾಧಿಸಿಯೇ ತೀರುತ್ತದೆ ಎಂದು ಹೇಳಿದರು.ಆತ್ಮನಿರ್ಭರ ಭಾರತ ನಮಗೆಲ್ಲರಿಗೂ ದೃಢ ಸಂಕಲ್ಪವಾಗಬೇಕು. ಆತ್ಮನಿರ್ಭರ ಭಾರತವನ್ನು ನಮ್ಮ ರೈತರು ಸಾಬೀತುಪಡಿಸಿದ್ದಾರೆ ಎಂದು ಪ್ರಧಾನಿಗಳು ಕೊಂಡಾಡಿದರು.
ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ. ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೊರೋನಾ ವಾರಿಯರ್ಸ್ ಸೇವೆ ಬಹುಮುಖ್ಯವಾಗಿದೆ ಎಂದು ವಾರಿಯರ್ಸ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ನೆನಪಿಸಿದರು.
ಚೀನೀ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಇತರ ದೇಶಗಳಿಂದ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಇನ್ನು ಮುಂದೆ ನಾವು ನಮ್ಮ ಸ್ವಂತ ಸರಕುಗಳನ್ನು ನಾವೇ ತಯಾರಿಸಿಕೊಳ್ಳೋಣ. ಭಾರತವು ಗುಣಮಟ್ಟದ ಸರಕುಗಳ ಆಶ್ರಯ ತಾಣವೆಂದು ಮತ್ತೊಮ್ಮೆ ಸಾಬೀತುಪಡಿಸೋಣ. ಒಂದು ಕಾಲದಲ್ಲಿ ಭಾರತೀಯ ಸರಕುಗಳನ್ನು ಪ್ರಪಂಚದಾದ್ಯಂತ ಗುಣಮಟ್ಟದ ವಸ್ತುಗಳೆಂದು ಪೂಜಿಸಲಾಗುತ್ತಿತ್ತು. ಭಾರತೀಯ ಸರಕುಗಳಿಗೆ ಹಿಂದಿನ ವೈಭವವನ್ನು ತರಲು ನಾವು ಮತ್ತೆ ಪ್ರಯತ್ನಿಸೋಣ. ಕೊರೋನಾ ಕಷ್ಟದ ಸಮಯದಲ್ಲೂ ಹೊಸ ಹಾದಿಯನ್ನು ಹುಡುಕೋಣ ಎಂದರು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…