ಸುಳ್ಯ: “ಸಂವಿಧಾನದ ಮೂಲ ಆಶಯ ಬದುಕುವ ಹಕ್ಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕು. ಇದರ ಮೂಲ ಸ್ವರೂಪವು ಉಳಿಯಬೇಕು” ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ, ಸಾಹಿತಿ , ಯಕ್ಷಗಾನ ಕಲಾವಿದ ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕಲಾ ವಿಭಾಗದ ಮಾನವಿಕ ಸಂಘ ದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು . ಭಾಷೆ, ಸಂಸ್ಕೃತಿ , ಸಾಹಿತ್ಯ, ಹಿರಿಯರ ಸಾಧನೆಗಳನ್ನು ನಾವು ರಕ್ಷಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಾಂಸ್ಕೃತಿಕ ವೈಶಿಷ್ಟ್ಯ ನಾಶವಾಗುತ್ತದೆ. ನಾವೆಲ್ಲರೂ ಓದುವುದು , ಜಾಗೃತವಾಗುವುದು ಮತ್ತು ಪ್ರತಿಕ್ರಿಯೆ ವ್ಯಕ್ತ ಪಡಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಉಪನ್ಯಾಸಕಿ ರೇಷ್ಮಾ ಎಂ ಎಂ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿನಿಯರು ಆಶಯ ಗೀತೆ ಹಾಡಿದರು. ಕಲಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಾನಕಿ ಟಿ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಎಸ್ ಕಾರ್ಯಕ್ರಮ ನಿರೂಪಿಸಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…