ಸುಳ್ಯ: “ಸಂವಿಧಾನದ ಮೂಲ ಆಶಯ ಬದುಕುವ ಹಕ್ಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕು. ಇದರ ಮೂಲ ಸ್ವರೂಪವು ಉಳಿಯಬೇಕು” ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ, ಸಾಹಿತಿ , ಯಕ್ಷಗಾನ ಕಲಾವಿದ ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕಲಾ ವಿಭಾಗದ ಮಾನವಿಕ ಸಂಘ ದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು . ಭಾಷೆ, ಸಂಸ್ಕೃತಿ , ಸಾಹಿತ್ಯ, ಹಿರಿಯರ ಸಾಧನೆಗಳನ್ನು ನಾವು ರಕ್ಷಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಾಂಸ್ಕೃತಿಕ ವೈಶಿಷ್ಟ್ಯ ನಾಶವಾಗುತ್ತದೆ. ನಾವೆಲ್ಲರೂ ಓದುವುದು , ಜಾಗೃತವಾಗುವುದು ಮತ್ತು ಪ್ರತಿಕ್ರಿಯೆ ವ್ಯಕ್ತ ಪಡಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಉಪನ್ಯಾಸಕಿ ರೇಷ್ಮಾ ಎಂ ಎಂ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿನಿಯರು ಆಶಯ ಗೀತೆ ಹಾಡಿದರು. ಕಲಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಾನಕಿ ಟಿ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಎಸ್ ಕಾರ್ಯಕ್ರಮ ನಿರೂಪಿಸಿದರು.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…