ಸುಳ್ಯ: “ಸಂವಿಧಾನದ ಮೂಲ ಆಶಯ ಬದುಕುವ ಹಕ್ಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕು. ಇದರ ಮೂಲ ಸ್ವರೂಪವು ಉಳಿಯಬೇಕು” ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ, ಸಾಹಿತಿ , ಯಕ್ಷಗಾನ ಕಲಾವಿದ ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕಲಾ ವಿಭಾಗದ ಮಾನವಿಕ ಸಂಘ ದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು . ಭಾಷೆ, ಸಂಸ್ಕೃತಿ , ಸಾಹಿತ್ಯ, ಹಿರಿಯರ ಸಾಧನೆಗಳನ್ನು ನಾವು ರಕ್ಷಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಾಂಸ್ಕೃತಿಕ ವೈಶಿಷ್ಟ್ಯ ನಾಶವಾಗುತ್ತದೆ. ನಾವೆಲ್ಲರೂ ಓದುವುದು , ಜಾಗೃತವಾಗುವುದು ಮತ್ತು ಪ್ರತಿಕ್ರಿಯೆ ವ್ಯಕ್ತ ಪಡಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಉಪನ್ಯಾಸಕಿ ರೇಷ್ಮಾ ಎಂ ಎಂ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿನಿಯರು ಆಶಯ ಗೀತೆ ಹಾಡಿದರು. ಕಲಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಾನಕಿ ಟಿ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಎಸ್ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…