ಸುಳ್ಯ: “ಸಂವಿಧಾನದ ಮೂಲ ಆಶಯ ಬದುಕುವ ಹಕ್ಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕು. ಇದರ ಮೂಲ ಸ್ವರೂಪವು ಉಳಿಯಬೇಕು” ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ, ಸಾಹಿತಿ , ಯಕ್ಷಗಾನ ಕಲಾವಿದ ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕಲಾ ವಿಭಾಗದ ಮಾನವಿಕ ಸಂಘ ದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು . ಭಾಷೆ, ಸಂಸ್ಕೃತಿ , ಸಾಹಿತ್ಯ, ಹಿರಿಯರ ಸಾಧನೆಗಳನ್ನು ನಾವು ರಕ್ಷಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಾಂಸ್ಕೃತಿಕ ವೈಶಿಷ್ಟ್ಯ ನಾಶವಾಗುತ್ತದೆ. ನಾವೆಲ್ಲರೂ ಓದುವುದು , ಜಾಗೃತವಾಗುವುದು ಮತ್ತು ಪ್ರತಿಕ್ರಿಯೆ ವ್ಯಕ್ತ ಪಡಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಉಪನ್ಯಾಸಕಿ ರೇಷ್ಮಾ ಎಂ ಎಂ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿನಿಯರು ಆಶಯ ಗೀತೆ ಹಾಡಿದರು. ಕಲಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಾನಕಿ ಟಿ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಎಸ್ ಕಾರ್ಯಕ್ರಮ ನಿರೂಪಿಸಿದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…