ಸುಳ್ಯ: “ಸಂವಿಧಾನದ ಮೂಲ ಆಶಯ ಬದುಕುವ ಹಕ್ಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕು. ಇದರ ಮೂಲ ಸ್ವರೂಪವು ಉಳಿಯಬೇಕು” ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ, ಸಾಹಿತಿ , ಯಕ್ಷಗಾನ ಕಲಾವಿದ ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕಲಾ ವಿಭಾಗದ ಮಾನವಿಕ ಸಂಘ ದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು . ಭಾಷೆ, ಸಂಸ್ಕೃತಿ , ಸಾಹಿತ್ಯ, ಹಿರಿಯರ ಸಾಧನೆಗಳನ್ನು ನಾವು ರಕ್ಷಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಾಂಸ್ಕೃತಿಕ ವೈಶಿಷ್ಟ್ಯ ನಾಶವಾಗುತ್ತದೆ. ನಾವೆಲ್ಲರೂ ಓದುವುದು , ಜಾಗೃತವಾಗುವುದು ಮತ್ತು ಪ್ರತಿಕ್ರಿಯೆ ವ್ಯಕ್ತ ಪಡಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಉಪನ್ಯಾಸಕಿ ರೇಷ್ಮಾ ಎಂ ಎಂ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿನಿಯರು ಆಶಯ ಗೀತೆ ಹಾಡಿದರು. ಕಲಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಾನಕಿ ಟಿ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಎಸ್ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…